<p><strong>ಶಿರಾ: </strong>ಟಿ.ಬಿ.ಜಯಚಂದ್ರ ಅವರು ಕ್ಷೇತ್ರದಲ್ಲಿ ₹2,500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಉಗನೇಕಟ್ಟೆ ಗೇಟ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಪರವಾಗಿ ಬುಧವಾರ ಮತಯಾಚಿಸಿ ಮಾತನಾಡಿದರು.</p>.<p>ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜಯಚಂದ್ರ ಅವರನ್ನು ಆಯ್ಕೆ ಮಾಡಿದರೆ, ರಾಜ್ಯದಲ್ಲಿ ಕಾಂಗ್ರೆಸ್ಗೆ ಶಕ್ತಿ ನೀಡಿದಂತಾಗುವುದು ಎಂದರು.</p>.<p>ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, ರಾಜಕೀಯ ಹಿನ್ನಲೆ ಹೊಂದಿರುವ ಕುಟುಂಬದಿಂದ ಬಂದಿರುವ ಎರಡು ಪಕ್ಷಗಳ ಅಭ್ಯರ್ಥಿಗಳು ಶಿರಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು ಎಂದು ಮೊದಲು ಹೇಳಿ ನಂತರ ಟೀಕೆ ಮಾಡಲಿ. ಕ್ಷೇತ್ರದ ಜನ ಪ್ರಬುದ್ಧರಾಗಿದ್ದಾರೆ. ಚುನಾವಣೆಯಲ್ಲಿ ಬೆಂಬಲ ನೀಡಲಿದ್ದಾರೆ ಎಂದರು.</p>.<p>ಉಗನೇಕಟ್ಟೆ ಗೇಟ್, ಸಿದ್ದನಹಳ್ಳಿ, ಪಟ್ಟನಾಯಕನಹಳ್ಳಿ ಕ್ರಾಸ್, ನಾದೂರು, ಪಟ್ಟನಾಯಕನಹಳ್ಳಿ, ಹೊಸಹಳ್ಳಿ, ಯಾದಲಡಕು, ಕ್ಯಾದಿಗುಂಟೆ ಬಸವನಹಳ್ಳಿ ಗೇಟ್, ಕೊಟ್ಟಿ, ಹುಲಿಕುಂಟೆ, ತಡಕಲೂರು, ಬೆಜ್ಜಿಹಳ್ಳಿ, ಚಿರತಹಳ್ಳಿ, ಲಕ್ಕನಹಳ್ಳಿ, ದೊಡ್ಡಬಾಣಗೆರೆ, ಬರಗೂರು, ಹಂದಿಕುಂಟೆ, ಗೋಣಿಹಳ್ಳಿ, ಕರೇಕ್ಯಾತನಹಳ್ಳಿ, ಮದಲೂರು ಮತ್ತು ಕೊಟ್ಟ ಗ್ರಾಮಗಳಲ್ಲಿ ಮತಯಾಚಿಸಿದರು.</p>.<p>ಕೆಪಿಸಿಸಿ ವಕ್ತಾರ ಬಿ.ಎನ್.ಚಂದ್ರಪ್ಪ, ಸಂತೋಷ್ ಲಾಡ್, ಆರ್.ರಾಜೇಂದ್ರ, ಸತೀಶ್ ಸಾಸಲು, ಕಲ್ಕೆರೆ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಆರ್.ಮಂಜುನಾಥ್, ಬರಗೂರು ನಟರಾಜು, ಎಚ್.ಗುರುಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong>ಟಿ.ಬಿ.ಜಯಚಂದ್ರ ಅವರು ಕ್ಷೇತ್ರದಲ್ಲಿ ₹2,500 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಉಗನೇಕಟ್ಟೆ ಗೇಟ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಪರವಾಗಿ ಬುಧವಾರ ಮತಯಾಚಿಸಿ ಮಾತನಾಡಿದರು.</p>.<p>ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಜಯಚಂದ್ರ ಅವರನ್ನು ಆಯ್ಕೆ ಮಾಡಿದರೆ, ರಾಜ್ಯದಲ್ಲಿ ಕಾಂಗ್ರೆಸ್ಗೆ ಶಕ್ತಿ ನೀಡಿದಂತಾಗುವುದು ಎಂದರು.</p>.<p>ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, ರಾಜಕೀಯ ಹಿನ್ನಲೆ ಹೊಂದಿರುವ ಕುಟುಂಬದಿಂದ ಬಂದಿರುವ ಎರಡು ಪಕ್ಷಗಳ ಅಭ್ಯರ್ಥಿಗಳು ಶಿರಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಏನು ಎಂದು ಮೊದಲು ಹೇಳಿ ನಂತರ ಟೀಕೆ ಮಾಡಲಿ. ಕ್ಷೇತ್ರದ ಜನ ಪ್ರಬುದ್ಧರಾಗಿದ್ದಾರೆ. ಚುನಾವಣೆಯಲ್ಲಿ ಬೆಂಬಲ ನೀಡಲಿದ್ದಾರೆ ಎಂದರು.</p>.<p>ಉಗನೇಕಟ್ಟೆ ಗೇಟ್, ಸಿದ್ದನಹಳ್ಳಿ, ಪಟ್ಟನಾಯಕನಹಳ್ಳಿ ಕ್ರಾಸ್, ನಾದೂರು, ಪಟ್ಟನಾಯಕನಹಳ್ಳಿ, ಹೊಸಹಳ್ಳಿ, ಯಾದಲಡಕು, ಕ್ಯಾದಿಗುಂಟೆ ಬಸವನಹಳ್ಳಿ ಗೇಟ್, ಕೊಟ್ಟಿ, ಹುಲಿಕುಂಟೆ, ತಡಕಲೂರು, ಬೆಜ್ಜಿಹಳ್ಳಿ, ಚಿರತಹಳ್ಳಿ, ಲಕ್ಕನಹಳ್ಳಿ, ದೊಡ್ಡಬಾಣಗೆರೆ, ಬರಗೂರು, ಹಂದಿಕುಂಟೆ, ಗೋಣಿಹಳ್ಳಿ, ಕರೇಕ್ಯಾತನಹಳ್ಳಿ, ಮದಲೂರು ಮತ್ತು ಕೊಟ್ಟ ಗ್ರಾಮಗಳಲ್ಲಿ ಮತಯಾಚಿಸಿದರು.</p>.<p>ಕೆಪಿಸಿಸಿ ವಕ್ತಾರ ಬಿ.ಎನ್.ಚಂದ್ರಪ್ಪ, ಸಂತೋಷ್ ಲಾಡ್, ಆರ್.ರಾಜೇಂದ್ರ, ಸತೀಶ್ ಸಾಸಲು, ಕಲ್ಕೆರೆ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಆರ್.ಮಂಜುನಾಥ್, ಬರಗೂರು ನಟರಾಜು, ಎಚ್.ಗುರುಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>