ತುಮಕೂರು: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2.62 ಲಕ್ಷ ಹಣವನ್ನು ನಗರ ಹೊರ ವಲಯದ ಕ್ಯಾತ್ಸಂದ್ರ ಜಾಸ್ ಟೋಲ್ ಬಳಿಯ ಚೆಕ್ಪೋಸ್ಟ್ನಲ್ಲಿ ಚುನಾವಣಾ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.
ಸುಧೀರ್ ಎಂಬುವರು ತಮ್ಮ ಕಾರ್ನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಹಣದ ಬಗ್ಗೆ ಸಮಂಜಸವಾದ ಉತ್ತರ ನೀಡದ ಕಾರಣ ಎಸ್ಎಸ್ಟಿ ತಂಡದ ಮುಖ್ಯಸ್ಥ ಸಿ.ಆರ್.ರಾಘವೇಂದ್ರ ಹಣ ವಶಕ್ಕೆ ಪಡೆದರು.