<p><strong>ಕುಣಿಗಲ್</strong>: ಟಿವಿ, ಮೊಬೈಲ್ ಯುಗದಲ್ಲಿ ರಂಗಭೂಮಿ ಉಳಿಯಬೇಕಾದರೆ ಗ್ರಾಮೀಣ ಪ್ರದೇಶದ ಕಲಾವಿದರಿಗೆ ನಾಟಕ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಬೇಕಿದೆ ಎಂದು ತಾಲ್ಲೂಕು ಕಲಾವಿದರ ಸಂಘದ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದರು.</p>.<p>ಸ್ಥಳೀಯ ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪರ್ವತಾಂಜನೇಯ ಕಲಾ ಬಳಗದಿಂದ ಮಂಗಳವಾರದಿಂದ ನಡೆದ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದ ರಂಗಭೂಮಿ ಕಲಾವಿದರು ಕಲಾ ಸೇವೆಗಾಗಿ ತ್ಯಾಗ ಮಾಡಿದ್ದಾರೆ. ತಾಲ್ಲೂಕಿನ ಪ್ರತಿಭೆಗಳಿಗೆ ಅವಕಾಶ ನೀಡುವ ಜೊತೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ 6 ದಿನ ನಿರಂತರ ನಾಟಕೋತ್ಸವ ನಡೆಯುತ್ತಿದೆ ಎಂದು ಹೇಳಿದರು.</p>.<p>ಬೆಂಗಳೂರಿನ ಕಮಲೇಶ್, ಗ್ರಾಮೀಣ ಪ್ರದೇಶದ ರಂಗಭೂಮಿ ಕಲಾವಿದರು ಪೌರಾಣಿಕ ನಾಟಕ ಪ್ರದರ್ಶನದ ಜತೆ ಸಾಮಾಜಿಕ, ಐತಿಹಾಸಿಕ ಮತ್ತು ಪ್ರಚಲಿತ ವಿದ್ಯಾಮಾನ, ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸುವ ನಾಟಕ ಪ್ರದರ್ಶನಕ್ಕೂ ಗಮನಹರಿಸಲು ಸಲಹೆ ನೀಡಿದರು.</p>.<p>ಪರ್ವತಾಂಜನೇಯ ಕಲಾ ಬಳಗದ ಜೆ.ಸಿ.ಪಿ.ಪಾಪಣ್ಣ , ತಾಲ್ಲೂಕಿನಲ್ಲಿ ಸಾವಿರಾರು ರಂಗಭೂಮಿ ಕಲಾವಿದರು ಇದ್ದಾರೆ. ಕಲಾ ಪ್ರತಿಭೆ ಪ್ರದರ್ಶನಕ್ಕೆ ಹೊರ ಊರುಗಳಿಗೆ ಹೋಗುತ್ತಿದ್ದು, ಸ್ಥಳೀಯವಾಗಿ ಅವಕಾಶ ಕಲ್ಪಿಸುವುದರ ಜೊತೆಗೆ ಹಿರಿಯ ಕಲಾವಿದರ ಸೇವೆ ಗುರುತಿಸುವ ಉದ್ದೇಶದಿಂದ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಹಿರಿಯ ಕಲಾವಿದ ಸೊಬಾಗನಹಳ್ಳಿ ನಾರಾಯಣಪ್ಪ ಅವರನ್ನು ಸನ್ಮಾನಿಸಲಾಯಿತು. ಕಲಾವಿದರಾದ ಚಲುವರಾಜು, ಹರೀಶ್ ನಾಯಕ್, ಲಕ್ಷ್ಮೀಕಾಂತ, ಸಿದ್ದಗಂಗಯ್ಯ ಸುರೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ಟಿವಿ, ಮೊಬೈಲ್ ಯುಗದಲ್ಲಿ ರಂಗಭೂಮಿ ಉಳಿಯಬೇಕಾದರೆ ಗ್ರಾಮೀಣ ಪ್ರದೇಶದ ಕಲಾವಿದರಿಗೆ ನಾಟಕ ಪ್ರದರ್ಶನಕ್ಕೆ ಪ್ರೋತ್ಸಾಹ ನೀಡಬೇಕಿದೆ ಎಂದು ತಾಲ್ಲೂಕು ಕಲಾವಿದರ ಸಂಘದ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದರು.</p>.<p>ಸ್ಥಳೀಯ ರಂಗಭೂಮಿ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪರ್ವತಾಂಜನೇಯ ಕಲಾ ಬಳಗದಿಂದ ಮಂಗಳವಾರದಿಂದ ನಡೆದ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದ ರಂಗಭೂಮಿ ಕಲಾವಿದರು ಕಲಾ ಸೇವೆಗಾಗಿ ತ್ಯಾಗ ಮಾಡಿದ್ದಾರೆ. ತಾಲ್ಲೂಕಿನ ಪ್ರತಿಭೆಗಳಿಗೆ ಅವಕಾಶ ನೀಡುವ ಜೊತೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ 6 ದಿನ ನಿರಂತರ ನಾಟಕೋತ್ಸವ ನಡೆಯುತ್ತಿದೆ ಎಂದು ಹೇಳಿದರು.</p>.<p>ಬೆಂಗಳೂರಿನ ಕಮಲೇಶ್, ಗ್ರಾಮೀಣ ಪ್ರದೇಶದ ರಂಗಭೂಮಿ ಕಲಾವಿದರು ಪೌರಾಣಿಕ ನಾಟಕ ಪ್ರದರ್ಶನದ ಜತೆ ಸಾಮಾಜಿಕ, ಐತಿಹಾಸಿಕ ಮತ್ತು ಪ್ರಚಲಿತ ವಿದ್ಯಾಮಾನ, ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸುವ ನಾಟಕ ಪ್ರದರ್ಶನಕ್ಕೂ ಗಮನಹರಿಸಲು ಸಲಹೆ ನೀಡಿದರು.</p>.<p>ಪರ್ವತಾಂಜನೇಯ ಕಲಾ ಬಳಗದ ಜೆ.ಸಿ.ಪಿ.ಪಾಪಣ್ಣ , ತಾಲ್ಲೂಕಿನಲ್ಲಿ ಸಾವಿರಾರು ರಂಗಭೂಮಿ ಕಲಾವಿದರು ಇದ್ದಾರೆ. ಕಲಾ ಪ್ರತಿಭೆ ಪ್ರದರ್ಶನಕ್ಕೆ ಹೊರ ಊರುಗಳಿಗೆ ಹೋಗುತ್ತಿದ್ದು, ಸ್ಥಳೀಯವಾಗಿ ಅವಕಾಶ ಕಲ್ಪಿಸುವುದರ ಜೊತೆಗೆ ಹಿರಿಯ ಕಲಾವಿದರ ಸೇವೆ ಗುರುತಿಸುವ ಉದ್ದೇಶದಿಂದ ನಾಟಕೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಹಿರಿಯ ಕಲಾವಿದ ಸೊಬಾಗನಹಳ್ಳಿ ನಾರಾಯಣಪ್ಪ ಅವರನ್ನು ಸನ್ಮಾನಿಸಲಾಯಿತು. ಕಲಾವಿದರಾದ ಚಲುವರಾಜು, ಹರೀಶ್ ನಾಯಕ್, ಲಕ್ಷ್ಮೀಕಾಂತ, ಸಿದ್ದಗಂಗಯ್ಯ ಸುರೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>