<p><strong>ಪಾವಗಡ:</strong> ಪುರಸಭೆಯ ಸಹಾಯಕ ಎಂಜಿನಿಯರ್ ಎಂದು ಹೇಳಿಕೊಂಡು ದುಷ್ಕರ್ಮಿಯೊಬ್ಬ ಗುತ್ತಿಗೆದಾರರಿಂದ₹ 3.72 ಲಕ್ಷ ಪಡೆದು ವಂಚಿಸಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.</p>.<p>ನಾನು ಪುರಸಭೆ ಸಹಾಯಕ ಎಂಜಿನಿಯರ್ ಎಂದು ಹೇಳಿಕೊಂಡು ಚಿನ್ನಾರೆಡ್ಡಿ ಎಂಬುವರು ಆಂಧ್ರದ ಕಡಪ ನಗರದ ಸೈಯದ್ ಹೈದರ್ ಆಲಿ ಎಂಬುವರಿಗೆ ಕರೆ ಮಾಡಿದ್ದಾರೆ. ಸಾರ್ವಜನಿಕ ಶೌಚಾಲಯದ ಟೆಂಡರ್ ಕರೆಯಲಾಗಿದೆ. ತಾವು ಉತ್ತಮವಾಗಿ ಗುತ್ತಿಗೆ ಕೆಲಸ ಮಾಡುತ್ತೀರಿ. ಟೆಂಡರ್ಗೆ ಅರ್ಜಿ ಸಲ್ಲಿಸಿ ಎಂದುತಿಳಿಸಿದ್ದಾನೆ.</p>.<p>ದುಷ್ಕರ್ಮಿಯ ಮಾತು ನಂಬಿ ಸೆ. 23ರಂದು ಪಟ್ಟಣಕ್ಕೆ ಆಗಮಿಸಿದ ಸೈಯದ್ ಅಲಿ ಅವರಿಂದ ಡಿ.ಡಿ ತೆಗೆಯಬೇಕು ಎಂದು ಹಣ ಪಡೆದು ಪರಾರಿಯಾಗಿದ್ದಾನೆ. ಬಳಿಕ ಆತನ ಮೊಬೈಲ್ ಸ್ವಿಚ್ಆಫ್ ಆಗಿದ್ದರಿಂದ ಪುರಸಭೆಯ ಬಳಿಗೆ ಹೋಗಿ ಗುತ್ತಿಗೆದಾರರು ವಿಚಾರಿಸಿದ್ದಾರೆ.</p>.<p>ಪುರಸಭೆ ಕಚೇರಿಯಲ್ಲಿ ಚಿನ್ನಾರೆಡ್ಡಿ ಎಂಬ ಹೆಸರಿನವರು ಕೆಲಸ ಮಾಡುತ್ತಿಲ್ಲ. ಯಾವುದೇ ಸಾರ್ವಜನಿಕ ಶೌಚಾಲಯದ ಟೆಂಡರ್ ಕರೆಯಲಾಗಿಲ್ಲ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಆಗ ತಾವು ಮೋಸ ಹೋಗಿರುವುದು ಗೊತ್ತಾಗಿದೆ.</p>.<p>ಈ ಸಂಬಂಧ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಪುರಸಭೆಯ ಸಹಾಯಕ ಎಂಜಿನಿಯರ್ ಎಂದು ಹೇಳಿಕೊಂಡು ದುಷ್ಕರ್ಮಿಯೊಬ್ಬ ಗುತ್ತಿಗೆದಾರರಿಂದ₹ 3.72 ಲಕ್ಷ ಪಡೆದು ವಂಚಿಸಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.</p>.<p>ನಾನು ಪುರಸಭೆ ಸಹಾಯಕ ಎಂಜಿನಿಯರ್ ಎಂದು ಹೇಳಿಕೊಂಡು ಚಿನ್ನಾರೆಡ್ಡಿ ಎಂಬುವರು ಆಂಧ್ರದ ಕಡಪ ನಗರದ ಸೈಯದ್ ಹೈದರ್ ಆಲಿ ಎಂಬುವರಿಗೆ ಕರೆ ಮಾಡಿದ್ದಾರೆ. ಸಾರ್ವಜನಿಕ ಶೌಚಾಲಯದ ಟೆಂಡರ್ ಕರೆಯಲಾಗಿದೆ. ತಾವು ಉತ್ತಮವಾಗಿ ಗುತ್ತಿಗೆ ಕೆಲಸ ಮಾಡುತ್ತೀರಿ. ಟೆಂಡರ್ಗೆ ಅರ್ಜಿ ಸಲ್ಲಿಸಿ ಎಂದುತಿಳಿಸಿದ್ದಾನೆ.</p>.<p>ದುಷ್ಕರ್ಮಿಯ ಮಾತು ನಂಬಿ ಸೆ. 23ರಂದು ಪಟ್ಟಣಕ್ಕೆ ಆಗಮಿಸಿದ ಸೈಯದ್ ಅಲಿ ಅವರಿಂದ ಡಿ.ಡಿ ತೆಗೆಯಬೇಕು ಎಂದು ಹಣ ಪಡೆದು ಪರಾರಿಯಾಗಿದ್ದಾನೆ. ಬಳಿಕ ಆತನ ಮೊಬೈಲ್ ಸ್ವಿಚ್ಆಫ್ ಆಗಿದ್ದರಿಂದ ಪುರಸಭೆಯ ಬಳಿಗೆ ಹೋಗಿ ಗುತ್ತಿಗೆದಾರರು ವಿಚಾರಿಸಿದ್ದಾರೆ.</p>.<p>ಪುರಸಭೆ ಕಚೇರಿಯಲ್ಲಿ ಚಿನ್ನಾರೆಡ್ಡಿ ಎಂಬ ಹೆಸರಿನವರು ಕೆಲಸ ಮಾಡುತ್ತಿಲ್ಲ. ಯಾವುದೇ ಸಾರ್ವಜನಿಕ ಶೌಚಾಲಯದ ಟೆಂಡರ್ ಕರೆಯಲಾಗಿಲ್ಲ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಆಗ ತಾವು ಮೋಸ ಹೋಗಿರುವುದು ಗೊತ್ತಾಗಿದೆ.</p>.<p>ಈ ಸಂಬಂಧ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>