<p><strong>ಶಿರಾ</strong>: ಕೋವಿಡ್ ಸಂಕಷ್ಟದ ಸಮಯದಲ್ಲಿ ಸರ್ಕಾರದ ನಿಯಮಾವಳಿಗಳನ್ನು ಜಾರಿಗೊಳಿಸಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.</p>.<p>ನಗರದ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಪೊಲೀಸ್ ಇಲಾಖೆಯಿಂದ ನೀಡಿದ 3 ಆಮ್ಲಜನಕ ಸಾಂದ್ರಕಗಳನ್ನು (ಆಕ್ಸಿಜನ್ ಕಾನ್ಸ್ಟ್ರೇಟರ್) ಸ್ವೀಕರಿಸಿ ಮಾತನಾಡಿದರು.</p>.<p>ಕೋವಿಡ್ ಸೋಂಕಿತರಿಗೆ ಆಮ್ಲಜನಕದ ಅವಶ್ಯಕತೆ ಹೆಚ್ಚಿದೆ. ಇಂತಹ ಸಮಯದಲ್ಲಿ ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆಗೆ 5, ಶಿರಾ ಆಸ್ಪತ್ರೆಗೆ 3 ಹಾಗೂ ತಿಪಟೂರು ಆಸ್ಪತ್ರೆಗೆ 2 ಸೇರಿದಂತೆ ಒಟ್ಟು 10 ಆಮ್ಲಜನಕದ ಸಾಂದ್ರಕಗಳನ್ನು ವಿತರಿಸುವ ಮೂಲಕ ಪೊಲೀಸ್ ಇಲಾಖೆ ಮಾನವೀಯತೆ ಮೆರೆದಿದೆ ಎಂದರು.</p>.<p>ಶಿರಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಇಲ್ಲ. ಶೀಘ್ರದಲ್ಲೇ ಆಮ್ಲಜನಕ ಉತ್ಪಾದನಾ ಘಟಕ ಕೆಲಸ ಪ್ರಾರಂಭಿಸಲಿದೆ. ಈಗಾಗಲೇ ಆಸ್ಪತ್ರೆಯಲ್ಲಿ 5 ಆಮ್ಲಜನಕ ಸಾಂದ್ರಕಗಳಿದ್ದು ಈಗ ಅಮೆಜಾನ್ ಕಂಪನಿಯವರು 5, ಪೊಲೀಸ್ ಇಲಾಖೆಯವರು 3 ಮತ್ತು ಸರ್ಕಾರದಿಂದ 7 ಬಂದಿರುವುದರಿಂದ ಒಟ್ಟು 20 ಆಮ್ಲಜನಕ ಸಾಂದ್ರಕಗಳು ಆಸ್ಪತ್ರೆಯಲ್ಲಿದ್ದು, ರೋಗಿಗಳಿಗೆ ಯಾವುದೇ ರೀತಿಯಲ್ಲಿ ಆಮ್ಲಜನಕದ ಸಮಸ್ಯೆ ಉಂಟಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ರೀತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದರು.</p>.<p>ತಹಶೀಲ್ದಾರ್ ಎಂ.ಮಮತ, ಡಿವೈಎಸ್ಪಿ ಕುಮಾರಪ್ಪ, ನಗರ ವೃತ್ತ ನಿರೀಕ್ಷಕ ಹನುಮಂತಪ್ಪ, ಗ್ರಾಮಾಂತರ ವೃತ್ತ ನಿರೀಕ್ಷಕ ರವಿಕುಮಾರ್, ಪಿಎಸ್ಐ ಸಿದ್ಧಾರ್ಥ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ಕೋವಿಡ್ ಸಂಕಷ್ಟದ ಸಮಯದಲ್ಲಿ ಸರ್ಕಾರದ ನಿಯಮಾವಳಿಗಳನ್ನು ಜಾರಿಗೊಳಿಸಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.</p>.<p>ನಗರದ ಸಾರ್ವಜನಿಕ ಆಸ್ಪತ್ರೆಗೆ ಗುರುವಾರ ಪೊಲೀಸ್ ಇಲಾಖೆಯಿಂದ ನೀಡಿದ 3 ಆಮ್ಲಜನಕ ಸಾಂದ್ರಕಗಳನ್ನು (ಆಕ್ಸಿಜನ್ ಕಾನ್ಸ್ಟ್ರೇಟರ್) ಸ್ವೀಕರಿಸಿ ಮಾತನಾಡಿದರು.</p>.<p>ಕೋವಿಡ್ ಸೋಂಕಿತರಿಗೆ ಆಮ್ಲಜನಕದ ಅವಶ್ಯಕತೆ ಹೆಚ್ಚಿದೆ. ಇಂತಹ ಸಮಯದಲ್ಲಿ ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆಗೆ 5, ಶಿರಾ ಆಸ್ಪತ್ರೆಗೆ 3 ಹಾಗೂ ತಿಪಟೂರು ಆಸ್ಪತ್ರೆಗೆ 2 ಸೇರಿದಂತೆ ಒಟ್ಟು 10 ಆಮ್ಲಜನಕದ ಸಾಂದ್ರಕಗಳನ್ನು ವಿತರಿಸುವ ಮೂಲಕ ಪೊಲೀಸ್ ಇಲಾಖೆ ಮಾನವೀಯತೆ ಮೆರೆದಿದೆ ಎಂದರು.</p>.<p>ಶಿರಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆ ಇಲ್ಲ. ಶೀಘ್ರದಲ್ಲೇ ಆಮ್ಲಜನಕ ಉತ್ಪಾದನಾ ಘಟಕ ಕೆಲಸ ಪ್ರಾರಂಭಿಸಲಿದೆ. ಈಗಾಗಲೇ ಆಸ್ಪತ್ರೆಯಲ್ಲಿ 5 ಆಮ್ಲಜನಕ ಸಾಂದ್ರಕಗಳಿದ್ದು ಈಗ ಅಮೆಜಾನ್ ಕಂಪನಿಯವರು 5, ಪೊಲೀಸ್ ಇಲಾಖೆಯವರು 3 ಮತ್ತು ಸರ್ಕಾರದಿಂದ 7 ಬಂದಿರುವುದರಿಂದ ಒಟ್ಟು 20 ಆಮ್ಲಜನಕ ಸಾಂದ್ರಕಗಳು ಆಸ್ಪತ್ರೆಯಲ್ಲಿದ್ದು, ರೋಗಿಗಳಿಗೆ ಯಾವುದೇ ರೀತಿಯಲ್ಲಿ ಆಮ್ಲಜನಕದ ಸಮಸ್ಯೆ ಉಂಟಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ರೀತಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದರು.</p>.<p>ತಹಶೀಲ್ದಾರ್ ಎಂ.ಮಮತ, ಡಿವೈಎಸ್ಪಿ ಕುಮಾರಪ್ಪ, ನಗರ ವೃತ್ತ ನಿರೀಕ್ಷಕ ಹನುಮಂತಪ್ಪ, ಗ್ರಾಮಾಂತರ ವೃತ್ತ ನಿರೀಕ್ಷಕ ರವಿಕುಮಾರ್, ಪಿಎಸ್ಐ ಸಿದ್ಧಾರ್ಥ್, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>