<p><strong>ಕುಣಿಗಲ್: </strong>ತಾಲ್ಲೂಕಿನ ಅಮೃತೂರು ಹೋಬಳಿಯಲ್ಲಿ ಮೂರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಮನೆ ಮತ್ತು ಕಾರ್ಯ ನಿರ್ವಹಿಸುತ್ತಿರುವ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಪ್ರಾಥಮಿಕ ಸಂಪರ್ಕದವರನ್ನು ಪತ್ತೆಹಚ್ಚಿ ಮಲ್ಲನಾಯಕಹಳ್ಳಿಯ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ.</p>.<p>ಜಿನ್ನಾಗರ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್ಗೆ ಸೋಂಕು ದೃಢವಾಗಿದೆ. ಇಬ್ಬರೂ ಅಮೃತೂರು ಹೋಬಳಿಯ ಸೆಭನ ಮತ್ತು ಶೆಟ್ಟಿಪುರದ ನಿವಾಸಿಗಳಾಗಿದ್ದಾರೆ.</p>.<p>ದೊಡ್ಡಕಲ್ಲಹಳ್ಳಿಯ 10ನೇ ತರಗತಿ ವಿದ್ಯಾರ್ಥಿಗೆ ಸೋಂಕು ಧೃಢವಾಗಿದೆ. ಬಾಲಕನ ಸಂಬಂಧಿ ಬೆಂಗಳೂರಿನಿಂದ ಈಚೆಗೆ ದೊಡ್ಡಕಲ್ಲಹಳ್ಳಿಗ್ರಾಮಕ್ಕೆ ಬಂದು ಹೋಗಿದ್ದರು. ಬೆಂಗಳೂರಿನಲ್ಲಿ ಅವರಿಗೆ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದಾಗ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಆ ಮಹಿಳೆಯ ಪ್ರಾಥಮಿಕ ಸಂಪರ್ಕದ ಹಿನ್ನೆಲೆಯಲ್ಲಿ ಬಾಲಕನಿಗೂ ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ಸ್ರಾವ ಪಡೆದು ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಈತ ಅಮೃತೂರು ಕೇಂದ್ರದಲ್ಲಿ ಪರೀಕ್ಷೆ ಸಹ ಬರೆದಿದ್ದಾನೆ.</p>.<p>ಬಾಲಕನ ಜತೆ ಇತರೆ ಮೂರು ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆದಿದ್ದಾರೆ. ಅಲ್ಲದೆ, ಗ್ರಾಮದಿಂದ ಪರೀಕ್ಷಾ ಕೇಂದ್ರಕ್ಕೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಇತರೆ ವಿದ್ಯಾರ್ಥಿಗಳೊಂದಿಗೆ ಬಂದಿದ್ದಾರೆ. ಇದರಿಂದಾಗಿ ಈ ಭಾಗದವರಲ್ಲಿ ಆತಂಕ ಮೂಡಿದೆ.</p>.<p>‘ವಿದ್ಯಾರ್ಥಿಯ ಗಂಟಲು ಸ್ರಾವ ಪರೀಕ್ಷೆಗೆ ಒಳಪಡಿಸಿದ್ದರ ಬಗ್ಗೆ ಆರೋಗ್ಯ ಇಲಾಖೆಯಿಂದ ಯಾವುದೇ ಮಾಹಿತಿ ನೀಡರಲಿಲ್ಲ. ಆದರೂ<br />ಬಾಲಕನಿಗೆ ಪ್ರತ್ಯೇಕವಾಗಿಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್: </strong>ತಾಲ್ಲೂಕಿನ ಅಮೃತೂರು ಹೋಬಳಿಯಲ್ಲಿ ಮೂರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಮನೆ ಮತ್ತು ಕಾರ್ಯ ನಿರ್ವಹಿಸುತ್ತಿರುವ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಪ್ರಾಥಮಿಕ ಸಂಪರ್ಕದವರನ್ನು ಪತ್ತೆಹಚ್ಚಿ ಮಲ್ಲನಾಯಕಹಳ್ಳಿಯ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ.</p>.<p>ಜಿನ್ನಾಗರ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್ಗೆ ಸೋಂಕು ದೃಢವಾಗಿದೆ. ಇಬ್ಬರೂ ಅಮೃತೂರು ಹೋಬಳಿಯ ಸೆಭನ ಮತ್ತು ಶೆಟ್ಟಿಪುರದ ನಿವಾಸಿಗಳಾಗಿದ್ದಾರೆ.</p>.<p>ದೊಡ್ಡಕಲ್ಲಹಳ್ಳಿಯ 10ನೇ ತರಗತಿ ವಿದ್ಯಾರ್ಥಿಗೆ ಸೋಂಕು ಧೃಢವಾಗಿದೆ. ಬಾಲಕನ ಸಂಬಂಧಿ ಬೆಂಗಳೂರಿನಿಂದ ಈಚೆಗೆ ದೊಡ್ಡಕಲ್ಲಹಳ್ಳಿಗ್ರಾಮಕ್ಕೆ ಬಂದು ಹೋಗಿದ್ದರು. ಬೆಂಗಳೂರಿನಲ್ಲಿ ಅವರಿಗೆ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದಾಗ ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಆ ಮಹಿಳೆಯ ಪ್ರಾಥಮಿಕ ಸಂಪರ್ಕದ ಹಿನ್ನೆಲೆಯಲ್ಲಿ ಬಾಲಕನಿಗೂ ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ಸ್ರಾವ ಪಡೆದು ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಈತ ಅಮೃತೂರು ಕೇಂದ್ರದಲ್ಲಿ ಪರೀಕ್ಷೆ ಸಹ ಬರೆದಿದ್ದಾನೆ.</p>.<p>ಬಾಲಕನ ಜತೆ ಇತರೆ ಮೂರು ವಿದ್ಯಾರ್ಥಿಗಳು ಸಹ ಪರೀಕ್ಷೆ ಬರೆದಿದ್ದಾರೆ. ಅಲ್ಲದೆ, ಗ್ರಾಮದಿಂದ ಪರೀಕ್ಷಾ ಕೇಂದ್ರಕ್ಕೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಇತರೆ ವಿದ್ಯಾರ್ಥಿಗಳೊಂದಿಗೆ ಬಂದಿದ್ದಾರೆ. ಇದರಿಂದಾಗಿ ಈ ಭಾಗದವರಲ್ಲಿ ಆತಂಕ ಮೂಡಿದೆ.</p>.<p>‘ವಿದ್ಯಾರ್ಥಿಯ ಗಂಟಲು ಸ್ರಾವ ಪರೀಕ್ಷೆಗೆ ಒಳಪಡಿಸಿದ್ದರ ಬಗ್ಗೆ ಆರೋಗ್ಯ ಇಲಾಖೆಯಿಂದ ಯಾವುದೇ ಮಾಹಿತಿ ನೀಡರಲಿಲ್ಲ. ಆದರೂ<br />ಬಾಲಕನಿಗೆ ಪ್ರತ್ಯೇಕವಾಗಿಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>