ಮನೆಗಳಿಗೆ ಹಾನಿಯಾಗಿದ್ದರೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಛಾಯಾಚಿತ್ರ ತೆಗೆದು, ಅಗತ್ಯ ದಾಖಲೆಗಳನ್ನು ಪಡೆದು ಹಾನಿಯ ಪ್ರಮಾಣದ ಅನುಸಾರ ತಕ್ಷಣ ತಂತ್ರಾಂಶದಲ್ಲಿ ಮಾಹಿತಿ ನಮೂದಿಸಿ, ಅನುಮೋದನೆಗಾಗಿ ಪ್ರಸ್ತಾವ ಸಲ್ಲಿಸಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ನಷ್ಟದ ಕುರಿತು ಅಧಿಕಾರಿಗಳು ಜಂಟಿ ಸಮೀಕ್ಷೆ ಕೈಗೊಂಡು ಬೆಳೆ ಹಾನಿಯ ಬಗ್ಗೆ ಪರಿಹಾರ ತಂತ್ರಾಂಶದಲ್ಲಿ ಮಾಹಿತಿ ದಾಖಲಿಸಬೇಕು
ಎಂದರು.