<p><strong>ತುಮಕೂರು</strong>: ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಸುಮಾರು 40 ಸಾವಿರ ನಿವೇಶನಗಳನ್ನು ವಿತರಿಸಲು ಯೋಜನೆ ಸಿದ್ಧಪಡಿಸಿದ್ದು, ಅದಕ್ಕಾಗಿ 2 ಸಾವಿರ ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ಮಹಾನಗರ ಪಾಲಿಕೆ, ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರತಿ ತಾಲ್ಲೂಕಿನಲ್ಲಿ 2 ಸಾವಿರದಿಂದ 3 ಸಾವಿರ ನಿವೇಶನ ವಿತರಿಸಲು ಜಾಗವನ್ನು ಗುರುತಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ (ಟೂಡಾ) ವತಿಯಿಂದ ನಗರದ ಹೊರವಲಯದಲ್ಲಿ ಸಾಕಷ್ಟು ವರ್ಷಗಳಿಂದ ಹೊಸ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ವಿತರಣೆ ಮಾಡಿಲ್ಲ. ಈ ನಿಟ್ಟಿನಲ್ಲಿ ಹೊಸ ಬಡಾವಣೆಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.</p>.<p>ವಸತಿ ಯೋಜನೆಗಳಡಿ ದಿಬ್ಬೂರು ಸೇರಿದಂತೆ ಇತರೆಡೆಗಳಲ್ಲಿ ನಿರ್ಮಿಸಿರುವ ಮನೆಗಳಲ್ಲಿ ಕಳ್ಳರು, ಮಾದಕ ವಸ್ತು ಮಾರಾಟ ಮಾಡುವವರು ಹಾಗೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರು ವಾಸಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂತಹವರನ್ನು ಮನೆಯಿಂದ ಖಾಲಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ‘ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ರಾಜ್ಯದಿಂದ ₹ 2 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ, ವಾಜಪೇಯಿ ನಗರ ವಸತಿ ಯೋಜನೆಯಡಿ ರಾಜ್ಯದಿಂದ ₹ 1.20 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ, ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ₹ 1.50 ಲಕ್ಷ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ರಾಜ್ಯದಿಂದ ₹ 6 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ ಅನುದಾನ ಸಿಗುತ್ತಿದೆ. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಪಕ್ಕಾ ಮನೆಗಾಗಿ ₹ 3 ಲಕ್ಷ, ಮನೆ ದುರಸ್ತಿಗೆ ₹ 50 ಸಾವಿರ ನೆರವು ನೀಡಲಾಗುತ್ತಿದೆ’ ಎಂದು ವಿವರಿಸಿದರು.</p>.<p>ನಗರ ವ್ಯಾಪ್ತಿಯಲ್ಲಿ 30 ಪ್ರದೇಶಗಳನ್ನು ಅಧಿಕೃತ ಕೊಳೆಗೇರಿಗಳೆಂದು ಘೋಷಿಸಲಾಗಿದ್ದು, 7,959 ಕುಟುಂಬಗಳ 46,727 ಜನರು ಕೊಳೆಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ಒಟ್ಟು 1,200 ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲಾಗಿದೆ ಎಂದರು.</p>.<p>ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿವೇಕಾನಂದ ಜಿ.ವಾರ್ಕರ್, ಸ್ಲಂ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಸುಮಾರು 40 ಸಾವಿರ ನಿವೇಶನಗಳನ್ನು ವಿತರಿಸಲು ಯೋಜನೆ ಸಿದ್ಧಪಡಿಸಿದ್ದು, ಅದಕ್ಕಾಗಿ 2 ಸಾವಿರ ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ಮಹಾನಗರ ಪಾಲಿಕೆ, ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಪ್ರತಿ ತಾಲ್ಲೂಕಿನಲ್ಲಿ 2 ಸಾವಿರದಿಂದ 3 ಸಾವಿರ ನಿವೇಶನ ವಿತರಿಸಲು ಜಾಗವನ್ನು ಗುರುತಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ (ಟೂಡಾ) ವತಿಯಿಂದ ನಗರದ ಹೊರವಲಯದಲ್ಲಿ ಸಾಕಷ್ಟು ವರ್ಷಗಳಿಂದ ಹೊಸ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ವಿತರಣೆ ಮಾಡಿಲ್ಲ. ಈ ನಿಟ್ಟಿನಲ್ಲಿ ಹೊಸ ಬಡಾವಣೆಗಳನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.</p>.<p>ವಸತಿ ಯೋಜನೆಗಳಡಿ ದಿಬ್ಬೂರು ಸೇರಿದಂತೆ ಇತರೆಡೆಗಳಲ್ಲಿ ನಿರ್ಮಿಸಿರುವ ಮನೆಗಳಲ್ಲಿ ಕಳ್ಳರು, ಮಾದಕ ವಸ್ತು ಮಾರಾಟ ಮಾಡುವವರು ಹಾಗೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರು ವಾಸಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂತಹವರನ್ನು ಮನೆಯಿಂದ ಖಾಲಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ‘ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ರಾಜ್ಯದಿಂದ ₹ 2 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ, ವಾಜಪೇಯಿ ನಗರ ವಸತಿ ಯೋಜನೆಯಡಿ ರಾಜ್ಯದಿಂದ ₹ 1.20 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ, ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ₹ 1.50 ಲಕ್ಷ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ರಾಜ್ಯದಿಂದ ₹ 6 ಲಕ್ಷ, ಕೇಂದ್ರದಿಂದ ₹ 1.50 ಲಕ್ಷ ಅನುದಾನ ಸಿಗುತ್ತಿದೆ. ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಪಕ್ಕಾ ಮನೆಗಾಗಿ ₹ 3 ಲಕ್ಷ, ಮನೆ ದುರಸ್ತಿಗೆ ₹ 50 ಸಾವಿರ ನೆರವು ನೀಡಲಾಗುತ್ತಿದೆ’ ಎಂದು ವಿವರಿಸಿದರು.</p>.<p>ನಗರ ವ್ಯಾಪ್ತಿಯಲ್ಲಿ 30 ಪ್ರದೇಶಗಳನ್ನು ಅಧಿಕೃತ ಕೊಳೆಗೇರಿಗಳೆಂದು ಘೋಷಿಸಲಾಗಿದ್ದು, 7,959 ಕುಟುಂಬಗಳ 46,727 ಜನರು ಕೊಳೆಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ಒಟ್ಟು 1,200 ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲಾಗಿದೆ ಎಂದರು.</p>.<p>ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿವೇಕಾನಂದ ಜಿ.ವಾರ್ಕರ್, ಸ್ಲಂ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>