<p><strong>ತುಮಕೂರು:</strong> ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 47 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, 127 ಪ್ರಕರಣಗಳು ಬಾಕಿ ಇವೆ. ಕೊರಟಗೆರೆ, ಮಧುಗಿರಿ, ಗುಬ್ಬಿ, ಕುಣಿಗಲ್ ತಾಲ್ಲೂಕುಗಳಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ನಡೆದಿವೆ.</p><p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಈ ಮಾಹಿತಿ ಹಂಚಿಕೊಂಡರು. ಪೋಕ್ಸೊ ಕಾಯ್ದೆ ಕುರಿತು ಅರಿವು ಮೂಡಿಸಲು ಜಿಲ್ಲೆಯ ಎಲ್ಲ ಶಾಲಾ–ಕಾಲೇಜುಗಳಲ್ಲಿ ನಾಮಫಲಕ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.</p><p>ಉಪಕಾರ ಯೋಜನೆಯಡಿ 3 ಮಕ್ಕಳು, ಹೆಣ್ಣು ಮಕ್ಕಳ ಅನುಪಾಲನಾ ಗೃಹ ಯೋಜನೆಯಡಿ 6 ಮಕ್ಕಳು ದಾಖಲಾಗಿದ್ದಾರೆ. ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ 10 ಜನ ಫಲಾನುಭವಿಗಳು ಮಾಸಿಕ ₹3,500 ಧನ ಸಹಾಯ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.</p><p>ಪ್ರತಿ ಶಾಲೆಯಲ್ಲಿ ಮೀನಾ ತಂಡ ರಚಿಸಿದ್ದು, ಇದರ ಮೂಲಕ ವಿದ್ಯಾರ್ಥಿಗಳಿಗೆ ಪೋಕ್ಸೊ ಹಾಗೂ ಬಾಲ್ಯ ವಿವಾಹ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಡಿಡಿಪಿಐ ಸಭೆಗೆ ಮಾಹಿತಿ ನೀಡಿದರು.</p><p>ಜಿಲ್ಲೆಯಲ್ಲಿ ಭಿಕ್ಷಾಟನೆ ಹೆಚ್ಚಾಗಿದ್ದು, ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡವರನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲು ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.</p><p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ‘ಜಿಲ್ಲೆಯಲ್ಲಿ ಪೋಕ್ಸೊ, ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಶಾಲಾ–ಕಾಲೇಜು ಹಂತದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿವೆ. ಕೆಲವು ಶಿಕ್ಷಕರಿಗೆ ಪೋಕ್ಸೊ ಕಾಯ್ದೆ ಕುರಿತು ಸರಿಯಾದ ಮಾಹಿತಿ ಇಲ್ಲ. ಮೊದಲು ಶಿಕ್ಷಕರಿಗೆ ಕಾಯ್ದೆ ಬಗ್ಗೆ ತಿಳಿಸಬೇಕು’ ಎಂದರು.</p><p>ಡಿವೈಎಸ್ಪಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ್, ಡಿಎಚ್ಒ ಡಾ.ಡಿ.ಎನ್.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನುಷಾ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಜಿಲ್ಲಾ ಅಧಿಕಾರಿ ಗಂಗಪ್ಪ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ 47 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, 127 ಪ್ರಕರಣಗಳು ಬಾಕಿ ಇವೆ. ಕೊರಟಗೆರೆ, ಮಧುಗಿರಿ, ಗುಬ್ಬಿ, ಕುಣಿಗಲ್ ತಾಲ್ಲೂಕುಗಳಲ್ಲಿ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ನಡೆದಿವೆ.</p><p>ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಈ ಮಾಹಿತಿ ಹಂಚಿಕೊಂಡರು. ಪೋಕ್ಸೊ ಕಾಯ್ದೆ ಕುರಿತು ಅರಿವು ಮೂಡಿಸಲು ಜಿಲ್ಲೆಯ ಎಲ್ಲ ಶಾಲಾ–ಕಾಲೇಜುಗಳಲ್ಲಿ ನಾಮಫಲಕ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.</p><p>ಉಪಕಾರ ಯೋಜನೆಯಡಿ 3 ಮಕ್ಕಳು, ಹೆಣ್ಣು ಮಕ್ಕಳ ಅನುಪಾಲನಾ ಗೃಹ ಯೋಜನೆಯಡಿ 6 ಮಕ್ಕಳು ದಾಖಲಾಗಿದ್ದಾರೆ. ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ 10 ಜನ ಫಲಾನುಭವಿಗಳು ಮಾಸಿಕ ₹3,500 ಧನ ಸಹಾಯ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.</p><p>ಪ್ರತಿ ಶಾಲೆಯಲ್ಲಿ ಮೀನಾ ತಂಡ ರಚಿಸಿದ್ದು, ಇದರ ಮೂಲಕ ವಿದ್ಯಾರ್ಥಿಗಳಿಗೆ ಪೋಕ್ಸೊ ಹಾಗೂ ಬಾಲ್ಯ ವಿವಾಹ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಡಿಡಿಪಿಐ ಸಭೆಗೆ ಮಾಹಿತಿ ನೀಡಿದರು.</p><p>ಜಿಲ್ಲೆಯಲ್ಲಿ ಭಿಕ್ಷಾಟನೆ ಹೆಚ್ಚಾಗಿದ್ದು, ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡವರನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲು ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.</p><p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ‘ಜಿಲ್ಲೆಯಲ್ಲಿ ಪೋಕ್ಸೊ, ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ. ಶಾಲಾ–ಕಾಲೇಜು ಹಂತದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿವೆ. ಕೆಲವು ಶಿಕ್ಷಕರಿಗೆ ಪೋಕ್ಸೊ ಕಾಯ್ದೆ ಕುರಿತು ಸರಿಯಾದ ಮಾಹಿತಿ ಇಲ್ಲ. ಮೊದಲು ಶಿಕ್ಷಕರಿಗೆ ಕಾಯ್ದೆ ಬಗ್ಗೆ ತಿಳಿಸಬೇಕು’ ಎಂದರು.</p><p>ಡಿವೈಎಸ್ಪಿ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ್, ಡಿಎಚ್ಒ ಡಾ.ಡಿ.ಎನ್.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನುಷಾ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಜಿಲ್ಲಾ ಅಧಿಕಾರಿ ಗಂಗಪ್ಪ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>