<p><strong>ಕುಣಿಗಲ್</strong>: ತಾಲ್ಲೂಕಿನಲ್ಲಿ 64,693 ಪಡಿತರ ಚೀಟಿಗಳು ಎಂದಿನಂತೆ ಚಾಲ್ತಿಯಲ್ಲಿವೆ. 171 ಚೀಟಿಗಳು ಮಾತ್ರ ರದ್ದಾಗಿದೆ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧುವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಆದಾಯ ತೆರಿಗೆ ಪಾವತಿ ಮಾಡುತ್ತಿರುವ 171 ಚೀಟಿಗಳು ರದ್ದಾಗಿದೆ. 437 ಅರ್ಜಿಗಳು ಬಂದಿದ್ದು ಮುಂದಿನ ದಿನಗಳಲ್ಲಿ ಪಡಿತರ ಚೀಟಿ ನೀಡಲಾಗುವುದು. ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದರು.</p>.<p>ನರೇಗಾ ಯೋಜನೆ ನಿರೀಕ್ಷಿತ ಗುರಿ ಮುಟ್ಟುವಲ್ಲಿ ಕೆಲ ಪಿಡಿಒಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಕಂಡು ಬಂದಿದ್ದು, ಗುರಿ ಸಾಧನೆಗೆ ಕ್ರಮವಹಿಸಲು ಸೂಚನೆ ನೀಡಿದರು. ದನದ ಕೊಟ್ಟಿಗೆ ನಿರ್ಮಾಣದ ಕ್ರಿಯಾಯೋಜನೆಗೆ ಅನುಮೋದನೆ ಸಿಗದ ಕಾರಣ ಸಮಸ್ಯೆಯಾಗುತ್ತಿದೆ ಎಂದು ಪಿಡಿಒಗಳು ದೂರಿದರು.</p>.<p>ಡಿಸೆಂಬರ್ ಮೊದಲ ವಾರದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನೀರಿನ ಟ್ಯಾಂಕ್ ಸೇರಿದಂತೆ ಚರಂಡಿಗಳನ್ನು ಸ್ವಚ್ಛಗೊಳಿಸುವ ಸಾಮೂಹಿಕ ಕಾರ್ಯಕ್ಕೆ ಚಾಲನೆ ನೀಡಲು ಸೂಚಿಸಿದರು.</p>.<p>ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಅರಿತು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ನವೆಂಬರ್ 30 ರಿಂದ ‘ಶಾಸಕರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಮೋದೂರಿನಲ್ಲಿ ಹಮ್ಮಿಕೊಂಡಿದ್ದು ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.</p>.<p>ತಾಲ್ಲೂಕಿನಲ್ಲಿ ಜೆಜೆಎಂ ಸಂಪೂರ್ಣ ವಿಫಲವಾಗಿ, ಜನರ ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿಶ್ವನಾಥ್ ಆರೋಪಿಸಿದರು. ಪಂಚಾಯಿತಿ ಅಧಿಕಾರಿಗಳು ಎಚ್ಚರಿಕೆಯಿಂದ ಗಮನಹರಿಸಲು ಸೂಚನೆ ನೀಡಿದರು.</p>.<p>ಸಭೆಗೆ ಯಾವುದೇ ಮಾಹಿತಿ ಮತ್ತು ದಾಖಲೆಗಳು ಇಲ್ಲದೆ, ಬೆಸ್ಕಾಂ ಇಇ, ಎಇಇ ಪರವಾಗಿ ಬಂದಿದ್ದ ಎಇ ಶ್ರೀನಿವಾಸ್ ನಾಯ್ಡು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕರು ಸಭೆಯಿಂದ ಹೊರಗಟ್ಟಿದರು.</p>.<p>ತಹಶೀಲ್ದಾರ್ ರಶ್ಮಿ, ಇಒ ನಾರಾಯಣ, ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನಲ್ಲಿ 64,693 ಪಡಿತರ ಚೀಟಿಗಳು ಎಂದಿನಂತೆ ಚಾಲ್ತಿಯಲ್ಲಿವೆ. 171 ಚೀಟಿಗಳು ಮಾತ್ರ ರದ್ದಾಗಿದೆ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಡಾ.ರಂಗನಾಥ್ ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧುವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಆದಾಯ ತೆರಿಗೆ ಪಾವತಿ ಮಾಡುತ್ತಿರುವ 171 ಚೀಟಿಗಳು ರದ್ದಾಗಿದೆ. 437 ಅರ್ಜಿಗಳು ಬಂದಿದ್ದು ಮುಂದಿನ ದಿನಗಳಲ್ಲಿ ಪಡಿತರ ಚೀಟಿ ನೀಡಲಾಗುವುದು. ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದರು.</p>.<p>ನರೇಗಾ ಯೋಜನೆ ನಿರೀಕ್ಷಿತ ಗುರಿ ಮುಟ್ಟುವಲ್ಲಿ ಕೆಲ ಪಿಡಿಒಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿರುವುದು ಕಂಡು ಬಂದಿದ್ದು, ಗುರಿ ಸಾಧನೆಗೆ ಕ್ರಮವಹಿಸಲು ಸೂಚನೆ ನೀಡಿದರು. ದನದ ಕೊಟ್ಟಿಗೆ ನಿರ್ಮಾಣದ ಕ್ರಿಯಾಯೋಜನೆಗೆ ಅನುಮೋದನೆ ಸಿಗದ ಕಾರಣ ಸಮಸ್ಯೆಯಾಗುತ್ತಿದೆ ಎಂದು ಪಿಡಿಒಗಳು ದೂರಿದರು.</p>.<p>ಡಿಸೆಂಬರ್ ಮೊದಲ ವಾರದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನೀರಿನ ಟ್ಯಾಂಕ್ ಸೇರಿದಂತೆ ಚರಂಡಿಗಳನ್ನು ಸ್ವಚ್ಛಗೊಳಿಸುವ ಸಾಮೂಹಿಕ ಕಾರ್ಯಕ್ಕೆ ಚಾಲನೆ ನೀಡಲು ಸೂಚಿಸಿದರು.</p>.<p>ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಅರಿತು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ನವೆಂಬರ್ 30 ರಿಂದ ‘ಶಾಸಕರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಮೋದೂರಿನಲ್ಲಿ ಹಮ್ಮಿಕೊಂಡಿದ್ದು ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.</p>.<p>ತಾಲ್ಲೂಕಿನಲ್ಲಿ ಜೆಜೆಎಂ ಸಂಪೂರ್ಣ ವಿಫಲವಾಗಿ, ಜನರ ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿಶ್ವನಾಥ್ ಆರೋಪಿಸಿದರು. ಪಂಚಾಯಿತಿ ಅಧಿಕಾರಿಗಳು ಎಚ್ಚರಿಕೆಯಿಂದ ಗಮನಹರಿಸಲು ಸೂಚನೆ ನೀಡಿದರು.</p>.<p>ಸಭೆಗೆ ಯಾವುದೇ ಮಾಹಿತಿ ಮತ್ತು ದಾಖಲೆಗಳು ಇಲ್ಲದೆ, ಬೆಸ್ಕಾಂ ಇಇ, ಎಇಇ ಪರವಾಗಿ ಬಂದಿದ್ದ ಎಇ ಶ್ರೀನಿವಾಸ್ ನಾಯ್ಡು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕರು ಸಭೆಯಿಂದ ಹೊರಗಟ್ಟಿದರು.</p>.<p>ತಹಶೀಲ್ದಾರ್ ರಶ್ಮಿ, ಇಒ ನಾರಾಯಣ, ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>