ಮೂರೂ ಪಕ್ಷಗಳು ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸುತ್ತಿವೆ. ಹೀಗಾಗಿ, ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮುಂದಾಗಿವೆ. ಈಗಾಗಲೇ, ಟಿಕೆಟ್ ದೊರೆಯುವುದು ಅನುಮಾನವಾದ ಹಿನ್ನೆಲೆಯಲ್ಲಿ ಕೆಲವರು ಬೇರೆ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ. ಗೆಲ್ಲುವ ವ್ಯಕ್ತಿಗಳನ್ನು ಸೆಳೆಯುವ ಪ್ರಯತ್ನ ಮೂರು ಪಕ್ಷಗಳಲ್ಲಿ ಗುಟ್ಟಾಗಿ ನಡೆಯುತ್ತಿದೆ.