<p><strong>ಮಧುಗಿರಿ</strong>: ತುಮುಲ್ನಿಂದ ತಾಲ್ಲೂಕಿನ ಹಾಲು ಉತ್ಪಾದಕರಿಗೆ ಸಬ್ಸಿಡಿ ದರದಲ್ಲಿ ಮೇವಿನ ಬೀಜ ವಿತರಿಸಲಾಗುತ್ತಿದೆ ಎಂದು ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ತುಮುಲ್ ಉಪಕೇಂದ್ರದಲ್ಲಿ ಮಂಗಳವಾರ ಮೇವಿನ ಬೀಜ ವಿತರಿಸಿ ಮಾತನಾಡಿದರು.</p>.<p>ಹಾಲು ಉತ್ಪಾದಕರು ಹಸಿರು ಮೇವು ಬೆಳೆದುಕೊಳ್ಳಲು ಉತ್ತೇಜನ ನೀಡಲು ಮತ್ತು ಗುಣಮಟ್ಟದ ಹಾಲು ಶೇಖರಣೆ ಮಾಡುವ ಉದ್ದೇಶದಿಂದ 153 ಸಂಘಗಳ 8,900 ಹಾಲು ಉತ್ಪಾದಕ ಸದಸ್ಯರಿಗೆ 70 ಟನ್ ಮೇವಿನ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ತಾಲ್ಲೂಕಿನ ಹಾಲು ಉತ್ಪಾದಕರಿಗೆ 56 ಸಾವಿರ ಕೆ.ಜಿ. ದಕ್ಷಿಣಆಫ್ರಿಕಾ ಬಿತ್ತನೆ ಮೇವಿನ ಬೀಜ ವಿತರಿಸಲಾಗುತ್ತಿದೆ. ಕೇ.ಜಿ.ಗೆ ₹35 ಮೂಲ ದರವಿದ್ದು, ಒಕ್ಕೂಟದಿಂದ ₹17.50 ಸಬ್ಸಿಡಿ ದೊರೆಯಲಿದೆ ಎಂದರು.</p>.<p>10 ಸಾವಿರ ಕೇ.ಜಿ., ಎಸ್ಎಸ್ಜಿ ಮಲ್ಟಿ ಕಟ್ ಮೇವಿನ ಬೀಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಕೇ.ಜಿ.ಗೆ ₹46 ಮೂಲ ದರವಿದೆ. ಒಕ್ಕೂಟ ₹23 ಸಬ್ಸಿಡಿ ನೀಡಲಿದೆ. ಇನ್ನು 3,500 ಕೇ.ಜಿ ಅಲಸಂದೆ ಕಾಳು ಬೀಜ ವಿತರಿಸಲಾಗುತ್ತಿದೆ. ಮೂಲ ದರ ಕೇಜಿಗೆ ₹72 ಇದೆ. ತುಮುಲ್ನಿಂದ ₹|36 ಸಬ್ಸಿಡಿ ದೊರೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ತುಮುಲ್ ಸಹಾಯಕ ವ್ಯವಸ್ಥಾಪಕ ಡಾ.ದೀಕ್ಷಿತ್, ವಿಸ್ತರಣಾಧಿಕಾರಿಗಳಾದ ಶಂಕರ್ ನಾಗ್, ದರ್ಶನ್, ಧರ್ಮವೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ತುಮುಲ್ನಿಂದ ತಾಲ್ಲೂಕಿನ ಹಾಲು ಉತ್ಪಾದಕರಿಗೆ ಸಬ್ಸಿಡಿ ದರದಲ್ಲಿ ಮೇವಿನ ಬೀಜ ವಿತರಿಸಲಾಗುತ್ತಿದೆ ಎಂದು ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ತುಮುಲ್ ಉಪಕೇಂದ್ರದಲ್ಲಿ ಮಂಗಳವಾರ ಮೇವಿನ ಬೀಜ ವಿತರಿಸಿ ಮಾತನಾಡಿದರು.</p>.<p>ಹಾಲು ಉತ್ಪಾದಕರು ಹಸಿರು ಮೇವು ಬೆಳೆದುಕೊಳ್ಳಲು ಉತ್ತೇಜನ ನೀಡಲು ಮತ್ತು ಗುಣಮಟ್ಟದ ಹಾಲು ಶೇಖರಣೆ ಮಾಡುವ ಉದ್ದೇಶದಿಂದ 153 ಸಂಘಗಳ 8,900 ಹಾಲು ಉತ್ಪಾದಕ ಸದಸ್ಯರಿಗೆ 70 ಟನ್ ಮೇವಿನ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.</p>.<p>ತಾಲ್ಲೂಕಿನ ಹಾಲು ಉತ್ಪಾದಕರಿಗೆ 56 ಸಾವಿರ ಕೆ.ಜಿ. ದಕ್ಷಿಣಆಫ್ರಿಕಾ ಬಿತ್ತನೆ ಮೇವಿನ ಬೀಜ ವಿತರಿಸಲಾಗುತ್ತಿದೆ. ಕೇ.ಜಿ.ಗೆ ₹35 ಮೂಲ ದರವಿದ್ದು, ಒಕ್ಕೂಟದಿಂದ ₹17.50 ಸಬ್ಸಿಡಿ ದೊರೆಯಲಿದೆ ಎಂದರು.</p>.<p>10 ಸಾವಿರ ಕೇ.ಜಿ., ಎಸ್ಎಸ್ಜಿ ಮಲ್ಟಿ ಕಟ್ ಮೇವಿನ ಬೀಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಕೇ.ಜಿ.ಗೆ ₹46 ಮೂಲ ದರವಿದೆ. ಒಕ್ಕೂಟ ₹23 ಸಬ್ಸಿಡಿ ನೀಡಲಿದೆ. ಇನ್ನು 3,500 ಕೇ.ಜಿ ಅಲಸಂದೆ ಕಾಳು ಬೀಜ ವಿತರಿಸಲಾಗುತ್ತಿದೆ. ಮೂಲ ದರ ಕೇಜಿಗೆ ₹72 ಇದೆ. ತುಮುಲ್ನಿಂದ ₹|36 ಸಬ್ಸಿಡಿ ದೊರೆಯಲಿದೆ ಎಂದು ಮಾಹಿತಿ ನೀಡಿದರು.</p>.<p>ತುಮುಲ್ ಸಹಾಯಕ ವ್ಯವಸ್ಥಾಪಕ ಡಾ.ದೀಕ್ಷಿತ್, ವಿಸ್ತರಣಾಧಿಕಾರಿಗಳಾದ ಶಂಕರ್ ನಾಗ್, ದರ್ಶನ್, ಧರ್ಮವೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>