ಜೂನ್ 2ರಂದು ಆರೋಪಿಯು ಕಳ್ಳತನ ಮಾಡಿದ್ದ. ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಸಿಪಿಐ ಟಿ.ಎಸ್. ರಾಧಾಕೃಷ್ಣ ನೇತೃತ್ವದಲ್ಲಿ ಜಯನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಎಚ್.ಎಸ್. ನವೀನ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಒಳಗೊಂಡ ತಂಡವು ಡಿವೈಎಸ್ಪಿ ತಿಪ್ಪೇಸ್ವಾಮಿ ಮಾರ್ಗದರ್ಶನದಲ್ಲಿ ಆರೋಪಿ ಬಂಧಿಸಿದೆ.