ಮಧ್ಯಾಹ್ನ ಎರಡು ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದರೂ, ಆನಂತರವೂ ಕೆಲವರು ಅನಗತ್ಯವಾಗಿ ಸಂಚರಿಸುತ್ತಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಹಾಗೂ ಕಾರುಗಳ ದಾಖಲೆ ಪರಿಶೀಲಿಸಿ, ಸೋಮವಾರದಿಂದ ಅನಗತ್ಯವಾಗಿ ವಾಹನಗಳ ಸಂಚಾರ ಮಾಡದಂತೆ ಸೋಮವಾರ ಬೆಳಿಗ್ಗೆಯಿಂದ ಆರಂಭವಾಗಲಿರುವ ಕರ್ಫ್ಯೂ ಮತ್ತಷ್ಟು ಕಠಿಣವಾಗಿರುವುದರಿಂದ ಅನಗತ್ಯವಾಗಿ ವಾಹನಗಳ ಓಡಾಟ ನಡೆಸಿದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಸಿಪಿಐ ಎಂ.ಎಸ್.ಸರ್ದಾರ್ ತಿಳಿಸಿದರು.