<p><strong>–ಮೈಲಾರಿ ಲಿಂಗಪ್ಪ</strong></p>.<p><strong>ತುಮಕೂರು</strong>: ಏಪ್ರಿಲ್ನಿಂದ ಜೂನ್ವರೆಗೆ ಜಿಲ್ಲೆಯಲ್ಲಿ ಒಟ್ಟು 87 ನವಜಾತ ಶಿಶುಗಳು ಮೃತಪಟ್ಟಿವೆ. ಇದೇ ಅವಧಿಯಲ್ಲಿ ತುಮಕೂರು ತಾಲ್ಲೂಕುವೊಂದರಲ್ಲೇ 53 ಶಿಶುಗಳ ಮೃತಪಟ್ಟಿವೆ. ಮಧುಗಿರಿ ಮತ್ತು ಪಾವಗಡ ಈ ಎರಡೂ ತಾಲ್ಲೂಕು ಹೊರತುಪಡಿಸಿದರೆ ಜಿಲ್ಲೆಯ ಉಳಿದ ಕಡೆಗಳಲ್ಲಿ ಮರಣ ಪ್ರಮಾಣ ನಿಯಂತ್ರಣಕ್ಕೆ ಬಂದಿಲ್ಲ.</p>.<p>ಇದೇ ಅವಧಿಯಲ್ಲಿ ಜಿಲ್ಲೆಯಾದ್ಯಂತ ಐವರು ತಾಯಂದಿರು ಸಾವನ್ನಪ್ಪಿದ್ದಾರೆ. ಸಿಸೇರಿಯನ್ ಹೆರಿಗೆ ಸಹ ಜಾಸ್ತಿಯಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಿದೆ. </p>.<p>ಇತ್ತೀಚೆಗೆ ಅವಧಿಪೂರ್ವದಲ್ಲಿಯೇ ಹೆರಿಗೆ ಆಗುತ್ತಿರುವುದು ಹೆಚ್ಚಾಗಿದೆ. ಇದರಿಂದ ಮಕ್ಕಳ ಮರಣ ಪ್ರಮಾಣವೂ ಅಧಿವಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಸಾವುಗಳು ಇದೇ ಕಾರಣಕ್ಕೆ ಸಂಭವಿಸಿವೆ.</p>.<p>ಕಡಿಮೆ ತೂಕ ಮತ್ತು ಹುಟ್ಟಿದ ತಕ್ಷಣ ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದರಿಂದ ಹೆಚ್ಚಿನ ನವಜಾತ ಶಿಶುಗಳು ಸಾವನ್ನಪ್ಪುತ್ತಿವೆ. ಮಗುವಿನಲ್ಲಿ ಕಾಣಿಸಿಕೊಳ್ಳುವ ಹೃದಯ ರೋಗ ಮತ್ತು ಕಿಡ್ನಿ ಸಮಸ್ಯೆ, ಹುಟ್ಟಿನಿಂದಲೇ ಬರುವ ಕಾಯಿಲೆಗಳಿಂದ ಸಾವು ಜಾಸ್ತಿಯಾಗಿವೆ ಎಂದು ಜಿಲ್ಲಾ ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<p>ಗರ್ಭಾವಸ್ಥೆ ಸಮಯದಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕೊರತೆ ಎದ್ದು ಕಾಣುತ್ತದೆ. ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆ ಮಾಡಿದರೆ ಮುಂದೆ ಜನಿಸುವ ಮಕ್ಕಳಿಗೆ ಹೆಚ್ಚಿನ ಸಮಸ್ಯೆಯಾಗುವುದಿಲ್ಲ ಎನ್ನುವುದು ವೈದ್ಯರ ಸಮಜಾಯಿಷಿ.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿಗಳ ಮುಖಾಂತರ ಪೌಷ್ಟಿಕ ಆಹಾರ ಪೂರೈಸಲಾಗುತ್ತಿದೆ. ಆದರೆ, ಅದು ಎಲ್ಲ ಗರ್ಭಿಣಿಯರನ್ನೂ ತಲುಪುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>–ಮೈಲಾರಿ ಲಿಂಗಪ್ಪ</strong></p>.<p><strong>ತುಮಕೂರು</strong>: ಏಪ್ರಿಲ್ನಿಂದ ಜೂನ್ವರೆಗೆ ಜಿಲ್ಲೆಯಲ್ಲಿ ಒಟ್ಟು 87 ನವಜಾತ ಶಿಶುಗಳು ಮೃತಪಟ್ಟಿವೆ. ಇದೇ ಅವಧಿಯಲ್ಲಿ ತುಮಕೂರು ತಾಲ್ಲೂಕುವೊಂದರಲ್ಲೇ 53 ಶಿಶುಗಳ ಮೃತಪಟ್ಟಿವೆ. ಮಧುಗಿರಿ ಮತ್ತು ಪಾವಗಡ ಈ ಎರಡೂ ತಾಲ್ಲೂಕು ಹೊರತುಪಡಿಸಿದರೆ ಜಿಲ್ಲೆಯ ಉಳಿದ ಕಡೆಗಳಲ್ಲಿ ಮರಣ ಪ್ರಮಾಣ ನಿಯಂತ್ರಣಕ್ಕೆ ಬಂದಿಲ್ಲ.</p>.<p>ಇದೇ ಅವಧಿಯಲ್ಲಿ ಜಿಲ್ಲೆಯಾದ್ಯಂತ ಐವರು ತಾಯಂದಿರು ಸಾವನ್ನಪ್ಪಿದ್ದಾರೆ. ಸಿಸೇರಿಯನ್ ಹೆರಿಗೆ ಸಹ ಜಾಸ್ತಿಯಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಿದೆ. </p>.<p>ಇತ್ತೀಚೆಗೆ ಅವಧಿಪೂರ್ವದಲ್ಲಿಯೇ ಹೆರಿಗೆ ಆಗುತ್ತಿರುವುದು ಹೆಚ್ಚಾಗಿದೆ. ಇದರಿಂದ ಮಕ್ಕಳ ಮರಣ ಪ್ರಮಾಣವೂ ಅಧಿವಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಸಾವುಗಳು ಇದೇ ಕಾರಣಕ್ಕೆ ಸಂಭವಿಸಿವೆ.</p>.<p>ಕಡಿಮೆ ತೂಕ ಮತ್ತು ಹುಟ್ಟಿದ ತಕ್ಷಣ ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದರಿಂದ ಹೆಚ್ಚಿನ ನವಜಾತ ಶಿಶುಗಳು ಸಾವನ್ನಪ್ಪುತ್ತಿವೆ. ಮಗುವಿನಲ್ಲಿ ಕಾಣಿಸಿಕೊಳ್ಳುವ ಹೃದಯ ರೋಗ ಮತ್ತು ಕಿಡ್ನಿ ಸಮಸ್ಯೆ, ಹುಟ್ಟಿನಿಂದಲೇ ಬರುವ ಕಾಯಿಲೆಗಳಿಂದ ಸಾವು ಜಾಸ್ತಿಯಾಗಿವೆ ಎಂದು ಜಿಲ್ಲಾ ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<p>ಗರ್ಭಾವಸ್ಥೆ ಸಮಯದಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕೊರತೆ ಎದ್ದು ಕಾಣುತ್ತದೆ. ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆ ಮಾಡಿದರೆ ಮುಂದೆ ಜನಿಸುವ ಮಕ್ಕಳಿಗೆ ಹೆಚ್ಚಿನ ಸಮಸ್ಯೆಯಾಗುವುದಿಲ್ಲ ಎನ್ನುವುದು ವೈದ್ಯರ ಸಮಜಾಯಿಷಿ.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿಗಳ ಮುಖಾಂತರ ಪೌಷ್ಟಿಕ ಆಹಾರ ಪೂರೈಸಲಾಗುತ್ತಿದೆ. ಆದರೆ, ಅದು ಎಲ್ಲ ಗರ್ಭಿಣಿಯರನ್ನೂ ತಲುಪುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>