ನಗರದ ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಮನುಷ್ಯರ ನಡುವಿನ ಸಂಬಂಧಗಳು ಶಿಥಿಲಗೊಂಡು, ಅನೇಕ ವೈಫಲ್ಯಗಳನ್ನು ಕಾಣುವಂತಾಗಿದೆ. ಜಾತಿ, ಮತ, ಧರ್ಮಗಳ ಹೆಸರಿನಲ್ಲಿ ಹಲವು ತಾರತಮ್ಯಗಳನ್ನು ನೋಡುತ್ತಿದ್ದೇವೆ’ ಎಂದು ವಿಷಾದಿಸಿದರು.