<p>ತುಮಕೂರು: ಉದಾರೀಕರಣ ನೀತಿ ನಮ್ಮ ಕೃಷಿಯ ಮೂಲ ಉದ್ದೇಶವನ್ನೇ ಮರೆಮಾಚಿದೆ. ನಾವು ದೇಶಿ ಅಸ್ಮಿತೆ ಉಳಿಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದೇವೆ ಎಂದು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ರಾಷ್ಟ್ರೀಯ ಸಂಯೋಜಕ ಬಸವರಾಜ ಪಾಟೀಲ್ ವೀರಾಪುರ ಹೇಳಿದರು.</p>.<p>ತಾಲ್ಲೂಕಿನ ದೊಡ್ಡಹೊಸೂರು ಗಾಂಧೀಜಿ ಸಹಜ ಬೇಸಾಯ ಆಶ್ರಮದಲ್ಲಿ ಕುಲಾಂತರಿ ತಳಿಯ ಆಹಾರದ ವಿರುದ್ಧ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಂಗಳವಾರ ಮಾತನಾಡಿದರು.</p>.<p>ಕೈಗಾರಿಕಾ ಕ್ರಾಂತಿಯ ದುಷ್ಪರಿಣಾಮದಿಂದ ಕೃಷಿ ಹಣ ಮಾಡುವ ಕ್ಷೇತ್ರವಾಗಿ ಮಾರ್ಪಟ್ಟಿದೆ. ರೈತರು ಬಂಡವಾಳಗಾರರಾಗಿ ರೂಪುಗೊಳ್ಳುತ್ತಿದ್ದಾರೆ. ಸರ್ಕಾರಗಳು ರೈತರ ಮುಗ್ಧತೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಕೃಷಿಯಲ್ಲಿ ಜೀವ ವಿರೋಧಿ ತಂತ್ರಜ್ಞಾನ ಪ್ರಯೋಗಿಸಿ ದ್ರೋಹ ಎಸಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಸ್ತುತ ದಿನಗಳಲ್ಲಿ ಸರ್ಕಾರಗಳು ಸಂವೇದನಾ ಶೀಲತೆ ಕಳೆದುಕೊಂಡಿವೆ. ಜನರಿಂದ ಜನರಿಗಾಗಿ ಪ್ರಜಾಪ್ರಭುತ್ವ ಎನ್ನುವ ತತ್ವ ಬದಲಾಗಿ ಕಾರ್ಪೋರೇಟ್ಗಳಿಂದ, ಕಾರ್ಪೋರೇಟ್ಗಳಿಗಾಗಿ ಎಂದಾಗಿದೆ. ವಿದೇಶಿ ಕಂಪನಿಗಳ ಒತ್ತಡಕ್ಕೆ ಸರ್ಕಾರಗಳು ಮಣಿಯುತ್ತಿದ್ದು, ರಾಷ್ಟ್ರೀಯವಾದ ಅನುಸರಿಸುತ್ತಿರುವ ನಾಯಕರೂ ಕಂಪನಿಗಳ ಪರವಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ.ಕೃಷ್ಣ, ‘ತಲೆ ತಲಾಂತರದಿಂದ ಬಂದಿರುವ ಕೃಷಿ ಹಾಗೂ ಅದರ ಪ್ರಾಮುಖ್ಯತೆ ನಾಶ ಮಾಡಲಾಗುತ್ತಿದೆ. ಕುಲಾಂತರಿ ಮುಕ್ತ ಭಾರತ ಸತ್ಯಾಗ್ರಹಕ್ಕೆ ಮಠ–ಮಾನ್ಯ, ಕನ್ನಡಪರ ಸಂಘಟನೆಗಳು, ಕೃಷಿ ಉತ್ಪನ್ನ ಬಳಕೆದಾರರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಪಶ್ಚಿಮಘಟ್ಟ ಉಳಿಸಿ ಆಂದೋಲದ ಸಿ.ಪಿ.ಮಾಧವನ್, ಪರಿಸರ ಹೋರಾಟಗಾರ ಬಾಲಕೃಷ್ಣ, ಗಾಂಧಿವಾದಿ ದೊರೆಸ್ವಾಮಿ, ಪರಿಸರವಾದಿ ಸಿ.ಯತಿರಾಜು, ವಿಜ್ಞಾನಿ ಮಂಜುನಾಥ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಉದಾರೀಕರಣ ನೀತಿ ನಮ್ಮ ಕೃಷಿಯ ಮೂಲ ಉದ್ದೇಶವನ್ನೇ ಮರೆಮಾಚಿದೆ. ನಾವು ದೇಶಿ ಅಸ್ಮಿತೆ ಉಳಿಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದೇವೆ ಎಂದು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ರಾಷ್ಟ್ರೀಯ ಸಂಯೋಜಕ ಬಸವರಾಜ ಪಾಟೀಲ್ ವೀರಾಪುರ ಹೇಳಿದರು.</p>.<p>ತಾಲ್ಲೂಕಿನ ದೊಡ್ಡಹೊಸೂರು ಗಾಂಧೀಜಿ ಸಹಜ ಬೇಸಾಯ ಆಶ್ರಮದಲ್ಲಿ ಕುಲಾಂತರಿ ತಳಿಯ ಆಹಾರದ ವಿರುದ್ಧ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಂಗಳವಾರ ಮಾತನಾಡಿದರು.</p>.<p>ಕೈಗಾರಿಕಾ ಕ್ರಾಂತಿಯ ದುಷ್ಪರಿಣಾಮದಿಂದ ಕೃಷಿ ಹಣ ಮಾಡುವ ಕ್ಷೇತ್ರವಾಗಿ ಮಾರ್ಪಟ್ಟಿದೆ. ರೈತರು ಬಂಡವಾಳಗಾರರಾಗಿ ರೂಪುಗೊಳ್ಳುತ್ತಿದ್ದಾರೆ. ಸರ್ಕಾರಗಳು ರೈತರ ಮುಗ್ಧತೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಕೃಷಿಯಲ್ಲಿ ಜೀವ ವಿರೋಧಿ ತಂತ್ರಜ್ಞಾನ ಪ್ರಯೋಗಿಸಿ ದ್ರೋಹ ಎಸಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಸ್ತುತ ದಿನಗಳಲ್ಲಿ ಸರ್ಕಾರಗಳು ಸಂವೇದನಾ ಶೀಲತೆ ಕಳೆದುಕೊಂಡಿವೆ. ಜನರಿಂದ ಜನರಿಗಾಗಿ ಪ್ರಜಾಪ್ರಭುತ್ವ ಎನ್ನುವ ತತ್ವ ಬದಲಾಗಿ ಕಾರ್ಪೋರೇಟ್ಗಳಿಂದ, ಕಾರ್ಪೋರೇಟ್ಗಳಿಗಾಗಿ ಎಂದಾಗಿದೆ. ವಿದೇಶಿ ಕಂಪನಿಗಳ ಒತ್ತಡಕ್ಕೆ ಸರ್ಕಾರಗಳು ಮಣಿಯುತ್ತಿದ್ದು, ರಾಷ್ಟ್ರೀಯವಾದ ಅನುಸರಿಸುತ್ತಿರುವ ನಾಯಕರೂ ಕಂಪನಿಗಳ ಪರವಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೆ ಪಿ.ಕೃಷ್ಣ, ‘ತಲೆ ತಲಾಂತರದಿಂದ ಬಂದಿರುವ ಕೃಷಿ ಹಾಗೂ ಅದರ ಪ್ರಾಮುಖ್ಯತೆ ನಾಶ ಮಾಡಲಾಗುತ್ತಿದೆ. ಕುಲಾಂತರಿ ಮುಕ್ತ ಭಾರತ ಸತ್ಯಾಗ್ರಹಕ್ಕೆ ಮಠ–ಮಾನ್ಯ, ಕನ್ನಡಪರ ಸಂಘಟನೆಗಳು, ಕೃಷಿ ಉತ್ಪನ್ನ ಬಳಕೆದಾರರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಪಶ್ಚಿಮಘಟ್ಟ ಉಳಿಸಿ ಆಂದೋಲದ ಸಿ.ಪಿ.ಮಾಧವನ್, ಪರಿಸರ ಹೋರಾಟಗಾರ ಬಾಲಕೃಷ್ಣ, ಗಾಂಧಿವಾದಿ ದೊರೆಸ್ವಾಮಿ, ಪರಿಸರವಾದಿ ಸಿ.ಯತಿರಾಜು, ವಿಜ್ಞಾನಿ ಮಂಜುನಾಥ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>