ಶಿಕ್ಷಣ ಪಡೆಯಲು ಇದ್ದಂತಹ ಮೇಲು- ಕೀಳು ಪದ್ಧತಿಯನ್ನು ನಿಷೇಧಿಸಿ, ಬಡವರಿಗಾಗಿ ಮೀಸಲಾತಿ ಜಾರಿಗೊಳಿಸಿದರು. ಮಲ ಹೊರುವ, ಜೀತದಾಳು ಪದ್ಧತಿ ನಿಷೇಧಿಸಿದರು. ರೈತರ ಮಕ್ಕಳು ಭೂಮಿ ತಾಯಿ ಮಕ್ಕಳೆಂದು ಘೋಷಿಸಿ, ಕನಿಷ್ಠ ಕೂಲಿ ಜಾರಿಗೊಳಿಸಿದರು. ಸಾಮಾನ್ಯ ವರ್ಗದವರಿಗೆ ನ್ಯಾಯಬೆಲೆ ಅಂಗಡಿ, ವಿದ್ಯಾರ್ಥಿಗಳಿಗೆ ಬಸ್ ಪಾಸ್, ಹಳ್ಳಿಗಳಿಗೆ ಕುಡಿಯುವ ನೀರು, ಕಾರ್ಮಿಕ ವರ್ಗಕ್ಕೆ ಆರ್ಥಿಕ ಭದ್ರತೆಯನ್ನು ತಂದುಕೊಟ್ಟವರು ಎಂದು ಹೇಳಿದರು.