ಗುರುವಾರ ಮುಂಜಾನೆ 8 ಗಂಟೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸಮೇತ ಬೋನನ್ನು ಹೊಸಹಳ್ಳಿ ಸಸ್ಯಕ್ಷೇತ್ರಕ್ಕೆ ತಪಾಸಣೆಗೆ ಕೊಂಡೊಯ್ದರು. ಅಲ್ಲಿ ತಾಲ್ಲೂಕು ಪಶು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಎನ್. ವಿರೂಪಾಕ್ಷ ಅವರು ಚಿರತೆ ಮರಿಯ ವೈದ್ಯಕೀಯ ಪರೀಕ್ಷೆ ನಡೆಸಿ, ಅಗತ್ಯ ಚಿಕಿತ್ಸೆ ನೀಡಿದರು. ನಂತರ ಬನ್ನೇರುಘಟ್ಟಕ್ಕೆ ಸಾಗಿಸಲಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.