ರಕ್ಷಣಾ ಇಲಾಖೆ ಸಾಮಾನ್ಯರ ಜೀವನದಲ್ಲಿ ಯಾಂತ್ರಿಕವಾಗಿ ಸ್ಪಂದಿಸುತ್ತಿದೆ. ಪೊಲೀಸರ ಮೃಗೀಯ ವರ್ತನೆ ಇಲಾಖೆಯ ನಂಬಿಕೆಯನ್ನೇ ಪ್ರಶ್ನಿಸುವಂತಿದೆ. ಅದರಲ್ಲಿ ಒಂದು ಮಗುವಿನ ಮಾತಿನಂತೆ ಮೃಗೀಯ ಮನಸ್ಸಿನ ಮನುಷ್ಯನಿಗಿಂತ, ಮಗುವಿನ ಮನಸ್ಸಿನ ಪ್ರಾಣಿಗಳೇ ಮೇಲು ಎಂಬ ಪ್ರತಿಬಿಂಬ ಹಾಗೂ ಗುಮಾಸ್ತರು ಮನಸ್ಸು ಮಾಡಿದರೆ ಯಾರನ್ನಾದರೂ ಯಾಮಾರಿಸಿ, ಗೊಂದಲ ಸೃಷ್ಟಿಸುತ್ತಾರೆಂಬ ‘ಯಮ ವರ್ಸಸ್ ಗುಮಾಸ್ತ’ ಪ್ರಯೋಗಗಳು ಮನಸೂರೆಗೊಂಡವು. ಮೆಳೇಹಳ್ಳಿ ದೇವರಾಜ್ ರಚಿಸಿ, ನಿರ್ದೇಶಿಸಿದ್ದು, 52 ಮಕ್ಕಳು ಲವಲವಿಕೆಯಿಂದ ಅಭಿನಯಿಸಿದರು.