<p><strong>ತಿಪಟೂರು:</strong> ನಗರದಲ್ಲಿ ಉಪ ಕಾರಾಗೃಹ ನವೀಕರಣಗೊಂಡು ಬಹಳ ದಿನ ಕಳೆದರೂ ಪುನರಾರಂಭದ ಭಾಗ್ಯ ಕಾಣುತ್ತಿಲ್ಲ.</p>.<p>ನೂರು ವರ್ಷಗಳ ಇತಿಹಾಸ ಹೊಂದಿದ್ದು, ಬ್ರಿಟಿಷರ ಕಾಲದಲ್ಲೇ ನಿರ್ಮಾಣ ಮಾಡಲಾಗಿದೆ. ಎರಡು ವರ್ಷಗಳ ಹಿಂದೆ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಕಾರಾಗೃಹದಲ್ಲಿದ್ದ ಅಪರಾಧಿಗಳೇ ಕಾರಾಗೃಹಕ್ಕೆ ಬೆಂಕಿ ಹಚ್ಚಿ ದಾಂಧಲೆಮಾಡಿ ಅಧಿಕಾರಿಗಳ ಮೇಲೂ ಹಲ್ಲೆಗೆ ಮುಂದಾಗಿದ್ದರು.</p>.<p>ಆಗ ಎಚ್ಚೆತ್ತ ಇಲಾಖೆ, ಮೇಲ್ದರ್ಜೆಗೇರಿಸಲು ಮುಂದಾಯಿತು. ₹50 ಲಕ್ಷ ವೆಚ್ಚದಲ್ಲಿ ನವೀಕರಿಸಲಾಗಿದ್ದು, 25 ಕೈದಿಗಳನ್ನು ಕಾರಾಗೃಹದಲ್ಲಿ ಇಡಬಹುದು. ಕಾರಾಗೃಹದ ಸುತ್ತಲೂ ಎತ್ತರವಾದ ತಡೆಗೋಡೆ ನಿರ್ಮಿಸ ಲಾಗಿದ್ದು, ಅದರ ಮೇಲುಭಾಗ ರೇಸರ್ ತಂತಿಗಳನ್ನು ಅಳವಡಿಸಲಾಗಿದೆ. ಒಬ್ಬರು ಜೈಲು ಅಧೀಕ್ಷಕರು, ಇಬ್ಬರು ಹೆಡ್ಕಾನ್ಸ್ಟೆಬಲ್, ಐವರು ಕಾನ್ಸ್ಟೆಬಲ್ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳನ್ನು ಒಳಗೊಂಡಂತೆ 10 ಪೊಲೀಸ್ ಠಾಣೆ ವ್ಯಾಪ್ತಿಯ ಅಪರಾಧಿಗಳನ್ನು ಈ ಕಾರಾಗೃಹದಲ್ಲಿಯೇ ಇರಿಸಲಾ ಗುತ್ತಿತ್ತು. ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಇಲ್ಲಿಂದಲೇ ಆರೋಪಿಗಳನ್ನು ಕರೆದೊಯ್ಯ ಲಾಗುತ್ತಿತ್ತು. ಆದರೆ, ನವೀಕರಣದ ಉದ್ದೇಶದಿಂದ 2 ವರ್ಷಗಳಿಂದ ಆರೋಪಿಗಳನ್ನು ತುಮಕೂರಿನ ಕಾರಾಗೃಹಕ್ಕೆ ಕರೆದೊಯ್ಯಲಾಗುತ್ತಿದೆ. ಇದರಿಂದ ಪೊಲೀಸ್ ಇಲಾಖೆ ಯ ಸಿಬ್ಬಂದಿಗೆ ತೊಂದರೆಯಾಗುತ್ತಿದೆ.</p>.<p>‘ಆರೋಪಿಗಳನ್ನು ಬಂಧಿಸಿದರೆ ಅವರನ್ನು ತುಮಕೂರಿನ ಕಾರಾಗೃಹಕ್ಕೆ ಕರೆದುಕೊಂಡು ಹೋಗಬೇಕು. ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಲ್ಲಿಂದ ಇಲ್ಲಿಗೆ ಕರೆದುಕೊಂಡು ಬರಬೇಕು. ಇದರಿಂದ ಓಡಾಟವೇ ಹೆಚ್ಚಾಗುತ್ತದೆ’ ಎನ್ನುತ್ತಾರೆ ಹೆಸರು ಹೇಳ ಬಯಸದ ಕಾರಾಗೃಹ ಸಿಬ್ಬಂದಿಯೊಬ್ಬರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ನಗರದಲ್ಲಿ ಉಪ ಕಾರಾಗೃಹ ನವೀಕರಣಗೊಂಡು ಬಹಳ ದಿನ ಕಳೆದರೂ ಪುನರಾರಂಭದ ಭಾಗ್ಯ ಕಾಣುತ್ತಿಲ್ಲ.</p>.<p>ನೂರು ವರ್ಷಗಳ ಇತಿಹಾಸ ಹೊಂದಿದ್ದು, ಬ್ರಿಟಿಷರ ಕಾಲದಲ್ಲೇ ನಿರ್ಮಾಣ ಮಾಡಲಾಗಿದೆ. ಎರಡು ವರ್ಷಗಳ ಹಿಂದೆ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಕಾರಾಗೃಹದಲ್ಲಿದ್ದ ಅಪರಾಧಿಗಳೇ ಕಾರಾಗೃಹಕ್ಕೆ ಬೆಂಕಿ ಹಚ್ಚಿ ದಾಂಧಲೆಮಾಡಿ ಅಧಿಕಾರಿಗಳ ಮೇಲೂ ಹಲ್ಲೆಗೆ ಮುಂದಾಗಿದ್ದರು.</p>.<p>ಆಗ ಎಚ್ಚೆತ್ತ ಇಲಾಖೆ, ಮೇಲ್ದರ್ಜೆಗೇರಿಸಲು ಮುಂದಾಯಿತು. ₹50 ಲಕ್ಷ ವೆಚ್ಚದಲ್ಲಿ ನವೀಕರಿಸಲಾಗಿದ್ದು, 25 ಕೈದಿಗಳನ್ನು ಕಾರಾಗೃಹದಲ್ಲಿ ಇಡಬಹುದು. ಕಾರಾಗೃಹದ ಸುತ್ತಲೂ ಎತ್ತರವಾದ ತಡೆಗೋಡೆ ನಿರ್ಮಿಸ ಲಾಗಿದ್ದು, ಅದರ ಮೇಲುಭಾಗ ರೇಸರ್ ತಂತಿಗಳನ್ನು ಅಳವಡಿಸಲಾಗಿದೆ. ಒಬ್ಬರು ಜೈಲು ಅಧೀಕ್ಷಕರು, ಇಬ್ಬರು ಹೆಡ್ಕಾನ್ಸ್ಟೆಬಲ್, ಐವರು ಕಾನ್ಸ್ಟೆಬಲ್ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<p>ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳನ್ನು ಒಳಗೊಂಡಂತೆ 10 ಪೊಲೀಸ್ ಠಾಣೆ ವ್ಯಾಪ್ತಿಯ ಅಪರಾಧಿಗಳನ್ನು ಈ ಕಾರಾಗೃಹದಲ್ಲಿಯೇ ಇರಿಸಲಾ ಗುತ್ತಿತ್ತು. ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಇಲ್ಲಿಂದಲೇ ಆರೋಪಿಗಳನ್ನು ಕರೆದೊಯ್ಯ ಲಾಗುತ್ತಿತ್ತು. ಆದರೆ, ನವೀಕರಣದ ಉದ್ದೇಶದಿಂದ 2 ವರ್ಷಗಳಿಂದ ಆರೋಪಿಗಳನ್ನು ತುಮಕೂರಿನ ಕಾರಾಗೃಹಕ್ಕೆ ಕರೆದೊಯ್ಯಲಾಗುತ್ತಿದೆ. ಇದರಿಂದ ಪೊಲೀಸ್ ಇಲಾಖೆ ಯ ಸಿಬ್ಬಂದಿಗೆ ತೊಂದರೆಯಾಗುತ್ತಿದೆ.</p>.<p>‘ಆರೋಪಿಗಳನ್ನು ಬಂಧಿಸಿದರೆ ಅವರನ್ನು ತುಮಕೂರಿನ ಕಾರಾಗೃಹಕ್ಕೆ ಕರೆದುಕೊಂಡು ಹೋಗಬೇಕು. ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಲ್ಲಿಂದ ಇಲ್ಲಿಗೆ ಕರೆದುಕೊಂಡು ಬರಬೇಕು. ಇದರಿಂದ ಓಡಾಟವೇ ಹೆಚ್ಚಾಗುತ್ತದೆ’ ಎನ್ನುತ್ತಾರೆ ಹೆಸರು ಹೇಳ ಬಯಸದ ಕಾರಾಗೃಹ ಸಿಬ್ಬಂದಿಯೊಬ್ಬರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>