ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ಜನತೆಗೆ ಶೀಘ್ರದಲ್ಲೇ ನಿವೇಶನ: ಶಾಸಕ ಭರವಸೆ

Last Updated 1 ಡಿಸೆಂಬರ್ 2020, 3:41 IST
ಅಕ್ಷರ ಗಾತ್ರ

ಶಿರಾ: ನಗರದ ಬಹುತೇಕ ಕಡೆ ಬಡಜನತೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದು ಅರ್ಹರಿಗೆ ಅತಿ ಶೀಘ್ರವಾಗಿ ನಿವೇಶನ ಹಂಚಿಕೆ ಮಾಡುವುದಾಗಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.

ನಗರದ ಕೋಟೆ ಬಡಾವಣೆಯಲ್ಲಿ ಸೋಮವಾರ ₹42 ಲಕ್ಷ ವೆಚ್ಚದ ಸಿ.ಸಿ ರಸ್ತೆ ಮತ್ತು ಸಿ.ಸಿ ಚರಂಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರದ ನಗರದ ಪ್ರತಿ ವಾರ್ಡ್‌ಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿ ರಸ್ತೆ, ಕುಡಿಯುವ ನೀರು, ಚರಂಡಿಯಂತಹ ಮೂಲ ಸೌಕರ್ಯಗಳನ್ನು ಪ್ರತಿಯೊಬ್ಬರಿಗೂ ಒದಗಿಸಲಾಗುವುದು ಎಂದರು.

ಸಂಸದ ಎ.ನಾರಾಯಣಸ್ವಾಮಿ, ನಾರು ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ಪೌರಾಯುಕ್ತ ಪರಮೇಶ್ವರಪ್ಪ, ಬಿಜೆಪಿ ನಗರ ಘಟಕದ ಅಧ್ಯಕ್ಷ ವಿಜಯರಾಜು, ಕೋಟೆ ರವಿ, ರಮೇಶ್ ಬಾಬು, ಬಸವರಾಜು, ಸುಧಾಕರ್ ಗೌಡ, ಮಾಲಿ ಸಿ.ಎಲ್.ಗೌಡ, ಪ್ರಕಾಶ್ ಗೌಡ, ರಮೇಶ್, ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT