<p><strong>ತುಮಕೂರು</strong>: ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಂಗಳವಾರ ಶಿರಾ ತಾಲ್ಲೂಕಿನ ಚನ್ನನಕುಂಟೆ ಬಳಿ ಹಳ್ಳ ದಾಟುತ್ತಿದ್ದ ಶಿಕ್ಷಕ ಆರೀಫ್ ವುಲ್ಲಾ (55) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ.</p>.<p>ದಾವೂದ್ ಪಾಳ್ಯ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆ ಮುಗಿಸಿಕೊಂಡು ಶಿರಾಕ್ಕೆ ಬೈಕ್ನಲ್ಲಿ ಬರುತ್ತಿದ್ದ ಸಮಯದಲ್ಲಿ ಘಟನೆ ನಡೆದಿದೆ.</p>.<p>ಶಿರಾದ ದೊಡ್ಡ ಕೆರೆಯ ಕೋಡಿ ನೀರು ಚನ್ನನಕುಂಟೆ ಹಳ್ಳದ ಮೂಲಕ ಹರಿದು ಹೋಗುತ್ತಿದ್ದು, ಅದನ್ನು ದಾಟಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಅವರನ್ನು ರಕ್ಷಿಸುವ ವೇಳೆಗೆ ಮೃತಪಟ್ಟಿದ್ದರು.</p>.<p><a href="https://www.prajavani.net/karnataka-news/bjp-created-blood-stream-to-win-election-says-h-d-kumaraswamy-959802.html" itemprop="url">ಸಮೀಕ್ಷೆಯಲ್ಲಿ ಮೂರಂಕಿ ಮೀರದ ಬಿಜೆಪಿಯಿಂದ ರಕ್ತಪಾತ ಸೃಷ್ಟಿ: ಕುಮಾರಸ್ವಾಮಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಂಗಳವಾರ ಶಿರಾ ತಾಲ್ಲೂಕಿನ ಚನ್ನನಕುಂಟೆ ಬಳಿ ಹಳ್ಳ ದಾಟುತ್ತಿದ್ದ ಶಿಕ್ಷಕ ಆರೀಫ್ ವುಲ್ಲಾ (55) ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ.</p>.<p>ದಾವೂದ್ ಪಾಳ್ಯ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಶಾಲೆ ಮುಗಿಸಿಕೊಂಡು ಶಿರಾಕ್ಕೆ ಬೈಕ್ನಲ್ಲಿ ಬರುತ್ತಿದ್ದ ಸಮಯದಲ್ಲಿ ಘಟನೆ ನಡೆದಿದೆ.</p>.<p>ಶಿರಾದ ದೊಡ್ಡ ಕೆರೆಯ ಕೋಡಿ ನೀರು ಚನ್ನನಕುಂಟೆ ಹಳ್ಳದ ಮೂಲಕ ಹರಿದು ಹೋಗುತ್ತಿದ್ದು, ಅದನ್ನು ದಾಟಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ದ್ವಿಚಕ್ರ ವಾಹನ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಅವರನ್ನು ರಕ್ಷಿಸುವ ವೇಳೆಗೆ ಮೃತಪಟ್ಟಿದ್ದರು.</p>.<p><a href="https://www.prajavani.net/karnataka-news/bjp-created-blood-stream-to-win-election-says-h-d-kumaraswamy-959802.html" itemprop="url">ಸಮೀಕ್ಷೆಯಲ್ಲಿ ಮೂರಂಕಿ ಮೀರದ ಬಿಜೆಪಿಯಿಂದ ರಕ್ತಪಾತ ಸೃಷ್ಟಿ: ಕುಮಾರಸ್ವಾಮಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>