<p><strong>ತುಮಕೂರು: </strong>‘ಉಪಮುಖ್ಯಮಂತ್ರಿ ಹುದ್ದೆ ರದ್ದು ಮಾಡುವಂತೆ ನಾನು ಸಹಿ ಸಂಗ್ರಹಿಸಿಲ್ಲ. ಬೇರೆಯವರು ಮಾಡಿರುವ ಮಾಹಿತಿಯೂ ನನಗೆ ಇಲ್ಲ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮರ್ಥ ಮುಖ್ಯಮಂತ್ರಿ ಇದ್ದಾರೆ. ಆ ಕಾರಣಕ್ಕೆ ಡಿಸಿಎಂ ಹುದ್ದೆ ಬೇಡ ಎಂದುಕೆಲ ದಿನಗಳ ಹಿಂದೆ ಹೇಳಿದ್ದೆ. ಕೆಲವು ಶಾಸಕರು, ಸಚಿವರು ಈ ವಿಚಾರವಾಗಿ ಸರಿಯಾಗಿ ಧ್ವನಿ ಎತ್ತಿದ್ದೀರಿ ಎಂದಿದ್ದರು. ಕೆಲವು ಸಚಿವರು ಮತ್ತು ಶಾಸಕರು ಡಿಸಿಎಂ ಹುದ್ದೆ ರದ್ದುಗೊಳಿಸಬೇಕು ಎಂದು ನನ್ನ ಬಳಿ ಹೇಳಿದ್ದರು’ ಎಂದರು.</p>.<p>‘ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ನನ್ನ ಭಾವನೆಗಳನ್ನು ವ್ಯಕ್ತಪಡಿಸಿದ್ದೇನೆ. ಯಾರಿಗೆ ಈ ವಿಷಯ ತಲುಪಿಸಬೇಕೋ ಅವರಿಗೆ ತಲುಪಿಸಿದ್ದೇನೆ’.‘ನಾನು ಯಾರ ವಿರುದ್ಧವೂ ಇಲ್ಲ. ಹೈಕಮಾಂಡ್ ಆದೇಶಗಳನ್ನು ಮೀರಿ ಹೋಗುವವನಲ್ಲ. ಸಂದರ್ಭ ಬಂದಾಗ ಪಕ್ಷದ ವೇದಿಕೆಯಲ್ಲಿ ವಿಚಾರ ಪ್ರಸ್ತಾಪಿಸುವೆ’ ಎಂದರು.</p>.<p>ಡಿಸಿಎಂ ಹುದ್ದೆ ರದ್ದು ವಿಚಾರ ಹಾದಿ ಬೀದಿಯಲ್ಲಿ ಚರ್ಚಿಸುವ ವಿಚಾರವಲ್ಲ ಎಂದಿರುವ ಡಿಸಿಎಂ ಗೋವಿಂದ ಕಾರಜೋಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ‘ಹೀಗೆ ಹೇಳುವವರು ಸಹ ಹಾದಿ ಬೀದಿಯಲ್ಲಿಯೇ ನಿಂತು ಮಾತನಾಡಿದ್ದಾರೆ. ಈ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಬಹುದಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಉಪಮುಖ್ಯಮಂತ್ರಿ ಹುದ್ದೆ ರದ್ದು ಮಾಡುವಂತೆ ನಾನು ಸಹಿ ಸಂಗ್ರಹಿಸಿಲ್ಲ. ಬೇರೆಯವರು ಮಾಡಿರುವ ಮಾಹಿತಿಯೂ ನನಗೆ ಇಲ್ಲ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮರ್ಥ ಮುಖ್ಯಮಂತ್ರಿ ಇದ್ದಾರೆ. ಆ ಕಾರಣಕ್ಕೆ ಡಿಸಿಎಂ ಹುದ್ದೆ ಬೇಡ ಎಂದುಕೆಲ ದಿನಗಳ ಹಿಂದೆ ಹೇಳಿದ್ದೆ. ಕೆಲವು ಶಾಸಕರು, ಸಚಿವರು ಈ ವಿಚಾರವಾಗಿ ಸರಿಯಾಗಿ ಧ್ವನಿ ಎತ್ತಿದ್ದೀರಿ ಎಂದಿದ್ದರು. ಕೆಲವು ಸಚಿವರು ಮತ್ತು ಶಾಸಕರು ಡಿಸಿಎಂ ಹುದ್ದೆ ರದ್ದುಗೊಳಿಸಬೇಕು ಎಂದು ನನ್ನ ಬಳಿ ಹೇಳಿದ್ದರು’ ಎಂದರು.</p>.<p>‘ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ನನ್ನ ಭಾವನೆಗಳನ್ನು ವ್ಯಕ್ತಪಡಿಸಿದ್ದೇನೆ. ಯಾರಿಗೆ ಈ ವಿಷಯ ತಲುಪಿಸಬೇಕೋ ಅವರಿಗೆ ತಲುಪಿಸಿದ್ದೇನೆ’.‘ನಾನು ಯಾರ ವಿರುದ್ಧವೂ ಇಲ್ಲ. ಹೈಕಮಾಂಡ್ ಆದೇಶಗಳನ್ನು ಮೀರಿ ಹೋಗುವವನಲ್ಲ. ಸಂದರ್ಭ ಬಂದಾಗ ಪಕ್ಷದ ವೇದಿಕೆಯಲ್ಲಿ ವಿಚಾರ ಪ್ರಸ್ತಾಪಿಸುವೆ’ ಎಂದರು.</p>.<p>ಡಿಸಿಎಂ ಹುದ್ದೆ ರದ್ದು ವಿಚಾರ ಹಾದಿ ಬೀದಿಯಲ್ಲಿ ಚರ್ಚಿಸುವ ವಿಚಾರವಲ್ಲ ಎಂದಿರುವ ಡಿಸಿಎಂ ಗೋವಿಂದ ಕಾರಜೋಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ‘ಹೀಗೆ ಹೇಳುವವರು ಸಹ ಹಾದಿ ಬೀದಿಯಲ್ಲಿಯೇ ನಿಂತು ಮಾತನಾಡಿದ್ದಾರೆ. ಈ ವಿಚಾರವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಬಹುದಿತ್ತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>