<p><strong>ತುಮಕೂರು: </strong>ರಾಜ್ಯದ ಕೆಲವು ಜಿಲ್ಲೆಯಲ್ಲಿ ಇಂದಿಗೂ ಕೆಎಸ್ಆರ್ಟಿಸಿ ಬಸ್ಗಳು ಕೋವಿಡ್ ಪೂರ್ವದಲ್ಲಿ ಇದ್ದ ಯಥಾಸ್ಥಿತಿಯಂತೆ ಕಾರ್ಯಾಚರಣೆ ನಡೆಸುತ್ತಿಲ್ಲ. ಆದರೆ ತುಮಕೂರು ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಸಾರಿಗೆ ವ್ಯವಸ್ಥೆ ವಾರದಿಂದ ವಾರಕ್ಕೆ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.</p>.<p>ಸದ್ಯ ಶೇ 87ರಷ್ಟು ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಸೋಮವಾರದ ವೇಳೆಗೆ ಶೇ 90ರಷ್ಟು ಬಸ್ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಜಿಲ್ಲಾ ಕೆಎಸ್ಆರ್ಟಿಸಿ ಮೂಲಗಳು ತಿಳಿಸುತ್ತವೆ.</p>.<p>‘ಜಿಲ್ಲೆಯಲ್ಲಿ ಒಟ್ಟು 621 ಬಸ್ಗಳು ನಿತ್ಯ ಸಂಚರಿಸುತ್ತವೆ. ಸದ್ಯ 542 ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಹಂತ ಹಂತವಾಗಿ ಮತ್ತಷ್ಟು ಬಸ್ಗಳು ಕಾರ್ಯಾಚರಣೆ ನಡೆಸುತ್ತವೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜು ತಿಳಿಸಿದರು.</p>.<p>‘ಸಾರ್ವಜನಿಕರು ಬೇಡಿಕೆಗೆ ಅನುಸಾರ ಬಸ್ಗಳನ್ನು ಓಡಿಸಲಾಗುತ್ತಿದೆ. ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ’ಎಂದರು.</p>.<p>ಲಾಕ್ಡೌನ್ ಅವಧಿಯಲ್ಲಿ ಜಿಲ್ಲೆಯ ಕೆಎಸ್ಆರ್ಟಿಸಿಗೆ ಬರೋಬ್ಬರಿ ₹ 36 ಕೋಟಿ ನಷ್ಟವಾಗಿತ್ತು. ಲಾಕ್ಡೌನ್ ತೆರವಾದ ನಂತರ ಹಂತ ಹಂತವಾಗಿ ಸಂಸ್ಥೆಯ ಬಸ್ಗಳು ರಸ್ತೆಗೆ ಇಳಿದಿವೆ.</p>.<p class="Subhead"><strong>ಶೇ 50 ರಷ್ಟು ಬಸ್ಗಳ ಕಾರ್ಯಾಚರಣೆ: </strong>ಖಾಸಗಿ ಬಸ್ಗಳು ಶೇ 50ರಷ್ಟು ಮಾತ್ರ ರಸ್ತೆಗಿಳಿದಿವೆ. ಕೆಎಸ್ಆರ್ಟಿಸಿ ಬಸ್ಗಳು ಲಾಕ್ಡೌನ್ ತೆರವಾದ ನಂತರ ಶೇ 50ರಷ್ಟು ಸೀಟುಗಳನ್ನು ಭರ್ತಿ ಮಾಡಬೇಕಾಗಿತ್ತು. ಆ ಸಂದರ್ಭದಲ್ಲಿ ಒಂದು ಮಾರ್ಗಕ್ಕೆ ಎರಡು ಬಸ್ಗಳನ್ನು ಬಿಟ್ಟರು. ಆದರೆ ಆ ಬಸ್ಗಳನ್ನು ಇಂದಿಗೂ ನಿಲ್ಲಿಸಿಲ್ಲ. ಇದರಿಂದ ಸಂಸ್ಥೆಗೂ ನಷ್ಟ. ನಮಗೂ ಪೆಟ್ಟು ಎಂದು ಖಾಸಗಿ ಬಸ್ಗಳ ಮಾಲೀಕರಸಂಘದ ಅಧ್ಯಕ್ಷ ಶಂಕರನಾರಾಯಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ರಾಜ್ಯದ ಕೆಲವು ಜಿಲ್ಲೆಯಲ್ಲಿ ಇಂದಿಗೂ ಕೆಎಸ್ಆರ್ಟಿಸಿ ಬಸ್ಗಳು ಕೋವಿಡ್ ಪೂರ್ವದಲ್ಲಿ ಇದ್ದ ಯಥಾಸ್ಥಿತಿಯಂತೆ ಕಾರ್ಯಾಚರಣೆ ನಡೆಸುತ್ತಿಲ್ಲ. ಆದರೆ ತುಮಕೂರು ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಸಾರಿಗೆ ವ್ಯವಸ್ಥೆ ವಾರದಿಂದ ವಾರಕ್ಕೆ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.</p>.<p>ಸದ್ಯ ಶೇ 87ರಷ್ಟು ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಸೋಮವಾರದ ವೇಳೆಗೆ ಶೇ 90ರಷ್ಟು ಬಸ್ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಜಿಲ್ಲಾ ಕೆಎಸ್ಆರ್ಟಿಸಿ ಮೂಲಗಳು ತಿಳಿಸುತ್ತವೆ.</p>.<p>‘ಜಿಲ್ಲೆಯಲ್ಲಿ ಒಟ್ಟು 621 ಬಸ್ಗಳು ನಿತ್ಯ ಸಂಚರಿಸುತ್ತವೆ. ಸದ್ಯ 542 ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಹಂತ ಹಂತವಾಗಿ ಮತ್ತಷ್ಟು ಬಸ್ಗಳು ಕಾರ್ಯಾಚರಣೆ ನಡೆಸುತ್ತವೆ’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜು ತಿಳಿಸಿದರು.</p>.<p>‘ಸಾರ್ವಜನಿಕರು ಬೇಡಿಕೆಗೆ ಅನುಸಾರ ಬಸ್ಗಳನ್ನು ಓಡಿಸಲಾಗುತ್ತಿದೆ. ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ’ಎಂದರು.</p>.<p>ಲಾಕ್ಡೌನ್ ಅವಧಿಯಲ್ಲಿ ಜಿಲ್ಲೆಯ ಕೆಎಸ್ಆರ್ಟಿಸಿಗೆ ಬರೋಬ್ಬರಿ ₹ 36 ಕೋಟಿ ನಷ್ಟವಾಗಿತ್ತು. ಲಾಕ್ಡೌನ್ ತೆರವಾದ ನಂತರ ಹಂತ ಹಂತವಾಗಿ ಸಂಸ್ಥೆಯ ಬಸ್ಗಳು ರಸ್ತೆಗೆ ಇಳಿದಿವೆ.</p>.<p class="Subhead"><strong>ಶೇ 50 ರಷ್ಟು ಬಸ್ಗಳ ಕಾರ್ಯಾಚರಣೆ: </strong>ಖಾಸಗಿ ಬಸ್ಗಳು ಶೇ 50ರಷ್ಟು ಮಾತ್ರ ರಸ್ತೆಗಿಳಿದಿವೆ. ಕೆಎಸ್ಆರ್ಟಿಸಿ ಬಸ್ಗಳು ಲಾಕ್ಡೌನ್ ತೆರವಾದ ನಂತರ ಶೇ 50ರಷ್ಟು ಸೀಟುಗಳನ್ನು ಭರ್ತಿ ಮಾಡಬೇಕಾಗಿತ್ತು. ಆ ಸಂದರ್ಭದಲ್ಲಿ ಒಂದು ಮಾರ್ಗಕ್ಕೆ ಎರಡು ಬಸ್ಗಳನ್ನು ಬಿಟ್ಟರು. ಆದರೆ ಆ ಬಸ್ಗಳನ್ನು ಇಂದಿಗೂ ನಿಲ್ಲಿಸಿಲ್ಲ. ಇದರಿಂದ ಸಂಸ್ಥೆಗೂ ನಷ್ಟ. ನಮಗೂ ಪೆಟ್ಟು ಎಂದು ಖಾಸಗಿ ಬಸ್ಗಳ ಮಾಲೀಕರಸಂಘದ ಅಧ್ಯಕ್ಷ ಶಂಕರನಾರಾಯಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>