ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ತೆರೆದಿರುವ ಚೆಕ್ಪೋಸ್ಟ್ನಲ್ಲಿ ತಪಾಸಣಾಧಿಕಾರಿಗಳು ಆಂಧ್ರಪ್ರದೇಶದ ಅನಂತಪುರ ಪಟ್ಟಣದ ನಿವಾಸಿ ರಸಗೊಬ್ಬರ ವ್ಯಾಪಾರಿ ಶ್ರೀಧರ ಬಾಬು ಅವರು ಹೊಸ ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ದಾಖಲೆ ಇಲ್ಲದ ₹ 3 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಕಾರನ್ನು ಕೂಡ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.