<p><strong>ತುಮಕೂರು: </strong>ಜಮೀನಿನ ದಾಖಲೆಗಳ ವಿಚಾರವಾಗಿ ತಹಶೀಲ್ದಾರ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ₹ 1.20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.</p>.<p>ರುದ್ರಸ್ವಾಮಿ, ಶಿವಕುಮಾರ್ ಬಂಧಿತರು. ಕೋರ ಹೋಬಳಿ ಕರೀಕೆರೆ ಗ್ರಾಮದ ರಂಗನಾಥ್ ಅವರು ಜಮೀನಿನ 1–5 ನಮೂನೆಯನ್ನು ತಹಶೀಲ್ದಾರ್ ಅವರಿಂದ ಪಡೆಯಬೇಕಿತ್ತು. ಆರೋಪಿ ಶಿವಕುಮಾರ್, ‘ನಾನು ತುಮಕೂರು ತಹಶೀಲ್ದಾರ್ ಮೋಹನ್ ಎಂದು ರಂಗನಾಥ್ ಅವರಿಗೆ ಕರೆ ಮಾಡಿ ಹೇಳಿದ್ದರು. ಈ ದಾಖಲೆಗಾಗಿ ₹ 1.25 ಲಕ್ಷವನ್ನು ನೀಡಬೇಕು. ಆ ಹಣ ಮತ್ತು ಸಂಬಂಧಿಸಿದ ದಾಖಲೆಗಳನ್ನು ರುದ್ರಸ್ವಾಮಿ ಬಳಿ ನೀಡಿ’ ಎಂದು ತಿಳಿಸಿದ್ದರು. ₹ 5 ಸಾವಿರವನ್ನು ಪಡೆದಿದ್ದರು. ಉಳಿದ ಹಣ ನೀಡುವಂತೆ ಆಗ್ರಹಿಸಿದ್ದರು.</p>.<p>ನಗರದ ಉಪ್ಪಾರಹಳ್ಳಿ ಮೇಲ್ಸೇತುವೆ ಬಳಿ ಬುಧವಾರ ರುದ್ರಸ್ವಾಮಿ, ರಂಗನಾಥ್ ಅವರಿಂದ ₹ 1.20 ಲಕ್ಷ ಸ್ವೀಕರಿಸುವಾಗ ಎಸಿಬಿ ಡಿವೈಎಸ್ಪಿ ಉಮಾಶಂಕರ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ತಹಶೀಲ್ದಾರ್ ಹೆಸರಿನಲ್ಲಿ ಕರೆ ಮಾಡಿ ವಂಚಿಸಿದ್ದ ಶಿವಕುಮಾರ್ನನ್ನು ಬಂಧಿಸಿದರು.</p>.<p>ಎಸಿಬಿ ಅಧಿಕಾರಿಗಳಾದ ಪ್ರವೀಣ್ ಕುಮಾರ್, ಇಮ್ರಾನ್ ಬೇಗ್, ಸಿಬ್ಬಂದಿ ಡಿ.ನರಸಿಂಹರಾಜು, ಕೆ.ಪಿ.ಶಿವಣ್ಣ, ಎಂ.ಚಂದ್ರಶೇಖರ್, ಎಲ್.ನರಸಿಂಹರಾಜು, ಟಿ.ಎಸ್.ಗಿರೀಶ್ ಕುಮಾರ್, ಮಹೇಶ್ ಕುಮಾರ್, ರಮೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜಮೀನಿನ ದಾಖಲೆಗಳ ವಿಚಾರವಾಗಿ ತಹಶೀಲ್ದಾರ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ₹ 1.20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.</p>.<p>ರುದ್ರಸ್ವಾಮಿ, ಶಿವಕುಮಾರ್ ಬಂಧಿತರು. ಕೋರ ಹೋಬಳಿ ಕರೀಕೆರೆ ಗ್ರಾಮದ ರಂಗನಾಥ್ ಅವರು ಜಮೀನಿನ 1–5 ನಮೂನೆಯನ್ನು ತಹಶೀಲ್ದಾರ್ ಅವರಿಂದ ಪಡೆಯಬೇಕಿತ್ತು. ಆರೋಪಿ ಶಿವಕುಮಾರ್, ‘ನಾನು ತುಮಕೂರು ತಹಶೀಲ್ದಾರ್ ಮೋಹನ್ ಎಂದು ರಂಗನಾಥ್ ಅವರಿಗೆ ಕರೆ ಮಾಡಿ ಹೇಳಿದ್ದರು. ಈ ದಾಖಲೆಗಾಗಿ ₹ 1.25 ಲಕ್ಷವನ್ನು ನೀಡಬೇಕು. ಆ ಹಣ ಮತ್ತು ಸಂಬಂಧಿಸಿದ ದಾಖಲೆಗಳನ್ನು ರುದ್ರಸ್ವಾಮಿ ಬಳಿ ನೀಡಿ’ ಎಂದು ತಿಳಿಸಿದ್ದರು. ₹ 5 ಸಾವಿರವನ್ನು ಪಡೆದಿದ್ದರು. ಉಳಿದ ಹಣ ನೀಡುವಂತೆ ಆಗ್ರಹಿಸಿದ್ದರು.</p>.<p>ನಗರದ ಉಪ್ಪಾರಹಳ್ಳಿ ಮೇಲ್ಸೇತುವೆ ಬಳಿ ಬುಧವಾರ ರುದ್ರಸ್ವಾಮಿ, ರಂಗನಾಥ್ ಅವರಿಂದ ₹ 1.20 ಲಕ್ಷ ಸ್ವೀಕರಿಸುವಾಗ ಎಸಿಬಿ ಡಿವೈಎಸ್ಪಿ ಉಮಾಶಂಕರ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ತಹಶೀಲ್ದಾರ್ ಹೆಸರಿನಲ್ಲಿ ಕರೆ ಮಾಡಿ ವಂಚಿಸಿದ್ದ ಶಿವಕುಮಾರ್ನನ್ನು ಬಂಧಿಸಿದರು.</p>.<p>ಎಸಿಬಿ ಅಧಿಕಾರಿಗಳಾದ ಪ್ರವೀಣ್ ಕುಮಾರ್, ಇಮ್ರಾನ್ ಬೇಗ್, ಸಿಬ್ಬಂದಿ ಡಿ.ನರಸಿಂಹರಾಜು, ಕೆ.ಪಿ.ಶಿವಣ್ಣ, ಎಂ.ಚಂದ್ರಶೇಖರ್, ಎಲ್.ನರಸಿಂಹರಾಜು, ಟಿ.ಎಸ್.ಗಿರೀಶ್ ಕುಮಾರ್, ಮಹೇಶ್ ಕುಮಾರ್, ರಮೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>