ಕೊರಟಗೆರೆ: ತಾಲ್ಲೂಕಿನ ಜಟ್ಟಿಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಶನಿವಾರ ಮಧ್ಯರಾತ್ರಿ ಬೈಕ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ವೆಂಕಟೇಶ(38) ಮೃತಪಟ್ಟಿದ್ದಾರೆ.
ವೆಂಕಟೇಶ್ ಕೊರಟಗೆರೆಯ ನಿವಾಸಿಯಾಗಿದ್ದು, ಪಟ್ಟಣದ ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಯಲ್ಲಾಪುರದ ಅಕ್ಕನ ಮನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.