ತುಮಕೂರು: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ನಲ್ಲಿದ್ದ ಶಿಕ್ಷಕ ದಂಪತಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಲ್ಲಸಂದ್ರ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಮೃತ ದಂಪತಿಯನ್ನುಈಶ್ವರಪ್ಪ(52), ಕಲ್ಪನಾ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಇಬ್ಬರು ಗುಬ್ಬಿಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾಲ್ಲೂಕಿ ಹೆಗ್ಗೆರೆಯಲ್ಲಿ ವಾಸವಿದ್ದರು. ಬುಧವಾರ ಬೆಳಿಗ್ಗೆ ಹೆಗ್ಗೆರೆಯಿಂದ ಗುಬ್ಬಿಗೆ ತೆರಳುವಾಗ ಘಟನೆ ಸಂಭವಿಸಿದೆ.