ಹೊಸದುರ್ಗ ಗ್ರಾಮದ ದ್ವಿಚಕ್ರ ವಾಹನ ಸವಾರರು ದೊಡ್ಡಹಳ್ಳಿ ಕಡೆಯಿಂದ ಬರುತ್ತಿದ್ದ ವೇಳೆ ಡಿಕ್ಕಿ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ರಾಜು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಎರಡೂ ಬೈಕ್ಗಳಲ್ಲಿ ತಲಾ ಮೂವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಉಳಿದ ಐವರ ಸ್ಥಿತಿ ಗಂಭೀರವಾಗಿದೆ. ವೈ.ಎನ್.ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.