ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಅಪಘಾತ; ಮೂವರ ಸಾವು

Last Updated 18 ಆಗಸ್ಟ್ 2020, 16:44 IST
ಅಕ್ಷರ ಗಾತ್ರ

ಪಾವಗಡ: ತಾಲ್ಲೂಕಿನಲ್ಲಿ ವಿವಿಧೆಡೆ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಮಂಗಳವಾಡ ಬಳಿ ಸೋಮವಾರ ಜೆಸಿಬಿ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ವಿ.ಎಚ್.ಪಾಳ್ಯದ ನಾಗರಾಜು (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೈಕ್‌ ಸವಾರ ಮಂಗಳವಾಡದಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಜೆಸಿಬಿ ಡಿಕ್ಕಿ ಹೊಡೆದಿದೆ. ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ನಿಂದ ಬಿದ್ದು ಸಾವು: ತಾಲ್ಲೂಕಿನ ಕೃಷ್ಣಗಿರಿ ಗೇಟ್ ಬಳಿ ಸೋಮವಾರ ರಾತ್ರಿ ತಾಲ್ಲೂಕಿನ ನಾಗಲಮಡಿಕೆ ಗ್ರಾಮದ ಚಿನ್ನಯ್ಯ (40) ಬೈಕ್‌ನಿಂದ ಬಿದ್ದು ಮೃತಪಟ್ಟಿದ್ದಾರೆ.

ಪಟ್ಟಣದಿಂದ ಸಿ.ಕೆ.ಪುರ ಕಡೆ ಹೋಗುತ್ತಿದ್ದಾಗ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ತಲೆಗೆ ಪೆಟ್ಟಾಗಿ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ ಮುಖಾಮುಖಿ ಡಿಕ್ಕಿ: ವೈ.ಎನ್.ಹೊಸಕೋಟೆ: ಹೋಬಳಿಯ ಇಂದ್ರಬೆಟ್ಟ ಗೇಟ್ ಬಳಿ ಸೋಮವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಂಧ್ರಪ್ರದೇಶದ ಜಗರೆಡ್ಡಿಹಳ್ಳಿ ನಿವಾಸಿ ರಾಜು (21) ಮೃತಪಟ್ಟಿದ್ದಾರೆ.

ಹೊಸದುರ್ಗ ಗ್ರಾಮದ ದ್ವಿಚಕ್ರ ವಾಹನ ಸವಾರರು ದೊಡ್ಡಹಳ್ಳಿ ಕಡೆಯಿಂದ ಬರುತ್ತಿದ್ದ ವೇಳೆ ಡಿಕ್ಕಿ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ರಾಜು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ಎರಡೂ ಬೈಕ್‌ಗಳಲ್ಲಿ ತಲಾ ಮೂವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಉಳಿದ ಐವರ ಸ್ಥಿತಿ ಗಂಭೀರವಾಗಿದೆ. ವೈ.ಎನ್.ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT