ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಣಿ ಅಪಘಾತ: ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಕಾರು ನಜ್ಜುಗುಜ್ಜು

ತಪ್ಪಿದ ಅನಾಹುತ, ಚಾಲಕನಿಗೆ ಗಾಯ
Published 28 ನವೆಂಬರ್ 2023, 14:04 IST
Last Updated 28 ನವೆಂಬರ್ 2023, 14:04 IST
ಅಕ್ಷರ ಗಾತ್ರ

ತುಮಕೂರು: ನಗರದ ಎಸ್‌.ಎಸ್‌.ವೃತ್ತದಲ್ಲಿ ಮಂಗಳವಾರ ನಡೆದ ಸರಣಿ ಅಪಘಾತದಲ್ಲಿ ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಕಾರು ಚಾಲಕ ಭರತ್‌ (25) ಗಾಯಗೊಂಡಿದ್ದಾರೆ.

ಕಾರಿನಲ್ಲಿ ಶ್ರೀನಿವಾಸ್ ಇರಲಿಲ್ಲ. ಅವರ ಮೊಮ್ಮಗನನ್ನು ಕಾರಿನಲ್ಲಿ ಚಾಲಕ ಶಾಲೆಯಿಂದ ಕರೆದುಕೊಂಡು ಬರುತ್ತಿದ್ದರು. ಕೋತಿತೋಪು ಕಡೆಯಿಂದ ಬಂದ ಕಾರು ಎಸ್.ಎಸ್.ವೃತ್ತದ ಬಳಿಯ ಸಿಗ್ನಲ್‌ನಲ್ಲಿ ಒಮಿನಿ ವಾಹನಕ್ಕೆ ಡಿಕ್ಕಿ ಹೊಡೆದು, ಮುಂದೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದೆ. ಒಮಿನಿ ವಾಹನ ಮುಂದೆ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಕಾರು, ಒಮಿನಿ ವಾಹನ ನಜ್ಜುಗುಜ್ಜಾಗಿವೆ. ಶ್ರೀನಿವಾಸ್‌ ಮೊಮ್ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ ಬಿ.ಎಚ್.ರಸ್ತೆಯಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಒಮಿನಿ ವಾಹನ ದೇವರಾಯನದುರ್ಗದ ಕಡೆಗೆ ತೆರಳುತ್ತಿತ್ತು. ಅಪಘಾತದಿಂದಾಗಿ ಸ್ವಲ್ಪ ಸಮಯ ಟ್ರಾಫಿಕ್‌ ಸಮಸ್ಯೆಯಾಯಿತು. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT