ಕೊರಟಗೆರೆ:ತಾಲ್ಲೂಕಿನ ಹೊಳವನ ಹಳ್ಳಿ ಹೋಬಳಿ ಕರೇಚಿಕ್ಕನಹಳ್ಳಿ ಬಳಿಯ ತಿರುವಿನಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ದ್ವಿಚಕ್ರವಾಹನ ಸವಾರಚಿನ್ನಾರೆಡ್ಡಿ (50) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಚಿನ್ನಾರೆಡ್ಡಿ ಪುರವರ ಹೋಬಳಿ ಚನ್ನಸಾಗರ ಗ್ರಾಮದವರು. ಬೆಂಗಳೂರಿನಿಂದ ದ್ವಿಚಕ್ರ ವಾಹನದಲ್ಲಿ ಸ್ವಗ್ರಾಮಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪಿಎಸ್ಐ ಎಚ್.ಮುತ್ತರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.