ಅವರು ಪಟ್ಟಣದ ಹೊರವಲಯದ ಗುಡ್ಡೇನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ.ನಲ್ಲಿ ಓದುತ್ತಿದ್ದಾರೆ. ಪರೀಕ್ಷೆ ಪ್ರವೇಶ ಪತ್ರ ತೆಗೆದುಕೊಂಡು ಹೋಗಲು ಮಧ್ಯಾಹ್ನ ಜಡೆಯಾದಿಂದ ತುರುವೇಕೆರೆಗೆ ಬರುತ್ತಿರುವಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಪಟ್ಟಣದ ಪೊಲೀಸರು ತಿಳಿಸಿದರು.