<p><strong>ಗುಬ್ಬಿ:</strong>ತಾಲ್ಲೂಕಿನ ನಿಟ್ಟೂರು ಹೋಬಳಿ ದೊಡ್ಡಗುಣಿ ಸಮೀಪ ಶನಿವಾರ ರಾತ್ರಿ ಖಾಸಗಿ ಬಸ್ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ವಾಹನಗಳು ಭಸ್ಮವಾಗಿ, ಮೂವರು ಸಜೀವ ದಹನವಾದರು.</p>.<p>ಬೆಂಗಳೂರಿನಿಂದ ಶಿವಮೊಗ್ಗದ ಕಡೆ ಸಾಗುತ್ತಿದ್ದ ಶ್ರೀಶ ಟ್ರಾವೆಲ್ಸ್ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಮಾರುತಿ ಓಮ್ನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ 2 ವಾಹನಗಳು ಹೊತ್ತಿ ಉರಿದಿವೆ. ಕಾರಿನಲ್ಲಿದ್ದ 7 ಜನರ ಪೈಕಿ ಮೂವರು ಸ್ಥಳದಲ್ಲಿಯೇ ಸುಟ್ಟು ಕರಕಲಾಗಿದ್ದಾರೆ. 4 ಮಂದಿಗೆ ಗಂಭೀರ ಗಾಯಗಳಾಗಿವೆ. ಒಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಮತ್ತು ಮೂವರು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಮೃತರನ್ನು ನಿಟ್ಟೂರಿಗೆ ಸಮೀಪದ ಎನ್.ಹೊಸಹಳ್ಳಿ ಗ್ರಾಮದ ವಸಂತಕುಮಾರ್ (55), ನರಸಮ್ಮ(60), ರಾಮಯ್ಯ(62) ಎಂದು ಗುರುತಿಸಲಾಗಿದೆ. ಬಸ್ನಲ್ಲಿ 45 ಮಂದಿ ಪ್ರಯಾಣಿಸುತ್ತಿದ್ದು, ಬೆಂಕಿ ತಗುಲಿದ ತಕ್ಷಣ ಕೆಳಗಿಳಿದ ಕಾರಣ ಪ್ರಾಣಹಾನಿ ಸಂಭವಿಸಿಲ್ಲ.</p>.<p class="Subhead">ಘಟನೆಯ ವಿವರ: ಎನ್.ಹೊಸಹಳ್ಳಿಯ ನರಸಮ್ಮ ಅವರಿಗೆ ಶನಿವಾರ ರಾತ್ರಿ 2 ಗಂಟೆಯ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ನಿಟ್ಟೂರು ಆಸ್ಪತ್ರೆಗೆ ಮಾರುತಿ ಓಮ್ನಿಯಲ್ಲಿ ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳವು ಕೆಲಕಾಲ ಸಂಪೂರ್ಣ ಸ್ಮಶಾನದಂತಾಗಿತ್ತು. ಸುಟ್ಟು ಕರಕಲಾದ ಶವಗಳು, ವಾಹನಗಳು, ರಕ್ತಸಿಕ್ತ ದೇಹಗಳು ನೋಡುಗರ ಮನಕಲಕಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong>ತಾಲ್ಲೂಕಿನ ನಿಟ್ಟೂರು ಹೋಬಳಿ ದೊಡ್ಡಗುಣಿ ಸಮೀಪ ಶನಿವಾರ ರಾತ್ರಿ ಖಾಸಗಿ ಬಸ್ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ವಾಹನಗಳು ಭಸ್ಮವಾಗಿ, ಮೂವರು ಸಜೀವ ದಹನವಾದರು.</p>.<p>ಬೆಂಗಳೂರಿನಿಂದ ಶಿವಮೊಗ್ಗದ ಕಡೆ ಸಾಗುತ್ತಿದ್ದ ಶ್ರೀಶ ಟ್ರಾವೆಲ್ಸ್ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಮಾರುತಿ ಓಮ್ನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ 2 ವಾಹನಗಳು ಹೊತ್ತಿ ಉರಿದಿವೆ. ಕಾರಿನಲ್ಲಿದ್ದ 7 ಜನರ ಪೈಕಿ ಮೂವರು ಸ್ಥಳದಲ್ಲಿಯೇ ಸುಟ್ಟು ಕರಕಲಾಗಿದ್ದಾರೆ. 4 ಮಂದಿಗೆ ಗಂಭೀರ ಗಾಯಗಳಾಗಿವೆ. ಒಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಮತ್ತು ಮೂವರು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಮೃತರನ್ನು ನಿಟ್ಟೂರಿಗೆ ಸಮೀಪದ ಎನ್.ಹೊಸಹಳ್ಳಿ ಗ್ರಾಮದ ವಸಂತಕುಮಾರ್ (55), ನರಸಮ್ಮ(60), ರಾಮಯ್ಯ(62) ಎಂದು ಗುರುತಿಸಲಾಗಿದೆ. ಬಸ್ನಲ್ಲಿ 45 ಮಂದಿ ಪ್ರಯಾಣಿಸುತ್ತಿದ್ದು, ಬೆಂಕಿ ತಗುಲಿದ ತಕ್ಷಣ ಕೆಳಗಿಳಿದ ಕಾರಣ ಪ್ರಾಣಹಾನಿ ಸಂಭವಿಸಿಲ್ಲ.</p>.<p class="Subhead">ಘಟನೆಯ ವಿವರ: ಎನ್.ಹೊಸಹಳ್ಳಿಯ ನರಸಮ್ಮ ಅವರಿಗೆ ಶನಿವಾರ ರಾತ್ರಿ 2 ಗಂಟೆಯ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ನಿಟ್ಟೂರು ಆಸ್ಪತ್ರೆಗೆ ಮಾರುತಿ ಓಮ್ನಿಯಲ್ಲಿ ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳವು ಕೆಲಕಾಲ ಸಂಪೂರ್ಣ ಸ್ಮಶಾನದಂತಾಗಿತ್ತು. ಸುಟ್ಟು ಕರಕಲಾದ ಶವಗಳು, ವಾಹನಗಳು, ರಕ್ತಸಿಕ್ತ ದೇಹಗಳು ನೋಡುಗರ ಮನಕಲಕಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>