ಕುಣಿಗಲ್: ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳ ಗ್ರಾಮದ ಬಳಿ ಭಾನುವಾರ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ.
ಮಂಟ್ಯಾ ಗ್ರಾಮದ ಹರೀಶ್ (28), ಗಿರೀಶ್ (30) ಮೃತರು. ಸ್ನೇಹಿತ ಪುಟ್ಟರಾಜು ಜತೆ ದ್ವಿಚಕ್ರವಾಹನದಲ್ಲಿ ಬಂದು ಸಮೀಪದ ತೋಟದಲ್ಲಿ ಕಲ್ಲಂಗಡಿ ಹಣ್ಣು ತಿಂದು ನಂತರ ವಾಪಸ್ ತೆರಳಲು ಈ ಮೂವರು ನಿಂತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದಿದೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.