<p><strong>ತುಮಕೂರು: </strong>ಧರ್ಮ, ಜಾತಿ ಅಥವಾ ಸಮುದಾಯಗಳ ನಡುವೆ ವೈಷಮ್ಯದ ಭಾವನೆಗಳನ್ನು ಬಿತ್ತುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಕೇಬಲ್ ಟಿ.ವಿಗಳ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಎಚ್ಚರಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>ಯಾವುದೇ ಕಾರ್ಯಕ್ರಮ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಸಂಭವ ಇದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ಅದರ ಪ್ರಸಾರ ನಿಷೇಧಿಸಬಹುದು ಎಂದರು.</p>.<p>ಸ್ಥಳೀಯ ಮಟ್ಟದಲ್ಲಿ ಕೇಬಲ್ ಚಾನೆಲ್ಗಳು ಪ್ರಸಾರ ಮಾಡುವ ವಿಷಯಗಳ ಬಗ್ಗೆ ಅಧಿಕೃತ ಅಧಿಕಾರಿಗಳು ನಿಗಾವಹಿಸಬೇಕು. ಪ್ರಸಾರವಾಗುವ ಕಾರ್ಯಕ್ರಮಗಳ ಕುರಿತು ದೂರುಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಅಥವಾ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಗೆ ದೂರು ನೀಡಬಹುದು ಎಂದು ತಿಳಿಸಿದರು.</p>.<p>ಸಭೆಯಲ್ಲಿ ಡಿವೈಎಸ್ಪಿ ತಿಪ್ಪೇಸ್ವಾಮಿ, ವರದಕ್ಷಿಣೆ ವಿರೋಧಿ ವೇದಿಕೆ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್, ಡಾ.ಟಿ.ಆರ್.ಲೀಲಾವತಿ, ಸಾಮಾಜಿಕ ಕಾರ್ಯಕರ್ತೆ ರೇಣುಕಾ ಪರಮೇಶ್, ಎಂಪ್ರೆಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಸಿದ್ಧಲಿಂಗಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಧರ್ಮ, ಜಾತಿ ಅಥವಾ ಸಮುದಾಯಗಳ ನಡುವೆ ವೈಷಮ್ಯದ ಭಾವನೆಗಳನ್ನು ಬಿತ್ತುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಕೇಬಲ್ ಟಿ.ವಿಗಳ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಎಚ್ಚರಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಜಿಲ್ಲಾ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>ಯಾವುದೇ ಕಾರ್ಯಕ್ರಮ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಸಂಭವ ಇದ್ದರೆ ಸಾರ್ವಜನಿಕ ಹಿತದೃಷ್ಟಿಯಿಂದ ಅದರ ಪ್ರಸಾರ ನಿಷೇಧಿಸಬಹುದು ಎಂದರು.</p>.<p>ಸ್ಥಳೀಯ ಮಟ್ಟದಲ್ಲಿ ಕೇಬಲ್ ಚಾನೆಲ್ಗಳು ಪ್ರಸಾರ ಮಾಡುವ ವಿಷಯಗಳ ಬಗ್ಗೆ ಅಧಿಕೃತ ಅಧಿಕಾರಿಗಳು ನಿಗಾವಹಿಸಬೇಕು. ಪ್ರಸಾರವಾಗುವ ಕಾರ್ಯಕ್ರಮಗಳ ಕುರಿತು ದೂರುಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಆಯಾ ತಾಲ್ಲೂಕಿನ ತಹಶೀಲ್ದಾರ್ ಅಥವಾ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಗೆ ದೂರು ನೀಡಬಹುದು ಎಂದು ತಿಳಿಸಿದರು.</p>.<p>ಸಭೆಯಲ್ಲಿ ಡಿವೈಎಸ್ಪಿ ತಿಪ್ಪೇಸ್ವಾಮಿ, ವರದಕ್ಷಿಣೆ ವಿರೋಧಿ ವೇದಿಕೆ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್, ಡಾ.ಟಿ.ಆರ್.ಲೀಲಾವತಿ, ಸಾಮಾಜಿಕ ಕಾರ್ಯಕರ್ತೆ ರೇಣುಕಾ ಪರಮೇಶ್, ಎಂಪ್ರೆಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಸಿದ್ಧಲಿಂಗಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>