<p><strong>ಗುಬ್ಬಿ</strong>: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಸಿಬ್ಬಂದಿಗಳಲ್ಲಿ ಗ್ರಾಮ ಪಂಚಾಯಿತಿ ಯೋಜನೆ ಹಾಗೂ ಅನುದಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬುಧವಾರ ಕಾರ್ಯಾಗಾರ ನಡೆಯಿತು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು ಜಿ. ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗಿಂತ ಗುಬ್ಬಿ ತಾಲ್ಲೂಕಿನಲ್ಲಿ ಕಡಿಮೆ ಅನುದಾನ ಬಳಸಿಕೊಂಡಿರುವುದು ವಿಪರ್ಯಾಸ ಎಂದರು.</p>.<p>ಸಮುದಾಯ ಆಧಾರಿತ ಕೆಲಸಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಇದುವರೆಗೂ ತಾಲ್ಲೂಕಿನಲ್ಲಿ ದನದ ಕೊಟ್ಟಿಗೆ ನಿರ್ಮಾಣಕ್ಕೆ ಹೆಚ್ಚಿನ ಗಮನ ನೀಡಿರಲಿಲ್ಲ. ತಾಲ್ಲೂಕಿನಲ್ಲಿ ದನದ ಕೊಟ್ಟಿಗೆಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಇನ್ನುಮುಂದೆ ಆದ್ಯತೆಗೆ ಅನುಗುಣವಾಗಿ ಅನುಮೋದನೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.</p>.<p>ನರೇಗಾ ಯೋಜನೆಯಲ್ಲಿ ಸದಸ್ಯರು ಸಮುದಾಯ ಆಧಾರಿತ ಕೆಲಸಗಳಿಗೆ ಆದ್ಯತೆ ನೀಡಿದಲ್ಲಿ ಅಭಿವೃದ್ಧಿ ಸಾಧ್ಯ. ಗ್ರಾಮ ಪಂಚಾಯಿತಿಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಹೆಚ್ಚುವರಿ ಕ್ರಿಯಾ ಯೋಜನೆ ಕಳಿಸಿಕೊಟ್ಟಲ್ಲಿ ಶೀಘ್ರ ಅನುಮೋದನೆ ನೀಡಲಾಗುವುದು ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ 194 ಎಕರೆ ಜಮೀನನ್ನು ಗುರುತಿಸಿ ಅರ್ಹ ವಸತಿ ರಹಿತರಿಗೆ ನಿವೇಶನ ಹಂಚಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ ವ್ಯವಸ್ಥಿತವಾಗಿಲ್ಲದ ಕಾರಣ ಕಂದಾಯ ವಸೂಲಾತಿ ಆಗುತ್ತಿಲ್ಲ. ಶೀಘ್ರ ತಾಲ್ಲೂಕಿನಲ್ಲಿ ಇ- ಸ್ವತ್ತು ಅಭಿಯಾನ ಪ್ರಾರಂಭಿಸಿ, ಕಂದಾಯ ವಸೂಲಾತಿ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ, ನಿಯಮಾನುಸಾರ ಗ್ರಾಮ ಪಂಚಾಯಿತಿಗಳಿಗೆ ಬೇಕು-ಬೇಡಗಳನ್ನು ತೀರ್ಮಾನಿಸುವ ಅಧಿಕಾರವಿದೆ. ಎಲ್ಲಾ ವಿಚಾರಗಳಿಗೂ ಮೇಲಧಿಕಾರಿಗಳು ಮೂಗು ತೂರಿಸುವ ಮೂಲಕ ಜನಪ್ರತಿನಿಧಿಗಳ ಹಕ್ಕನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಇದ್ದಲ್ಲಿ ಕಾಮಗಾರಿಗೆ ಅಗತ್ಯ ಅನುದಾನವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.</p>.<p>ಕಾರ್ಯಾಗಾರದಲ್ಲಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಸಿಬ್ಬಂದಿಗಳಲ್ಲಿ ಗ್ರಾಮ ಪಂಚಾಯಿತಿ ಯೋಜನೆ ಹಾಗೂ ಅನುದಾನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬುಧವಾರ ಕಾರ್ಯಾಗಾರ ನಡೆಯಿತು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು ಜಿ. ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗಿಂತ ಗುಬ್ಬಿ ತಾಲ್ಲೂಕಿನಲ್ಲಿ ಕಡಿಮೆ ಅನುದಾನ ಬಳಸಿಕೊಂಡಿರುವುದು ವಿಪರ್ಯಾಸ ಎಂದರು.</p>.<p>ಸಮುದಾಯ ಆಧಾರಿತ ಕೆಲಸಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಇದುವರೆಗೂ ತಾಲ್ಲೂಕಿನಲ್ಲಿ ದನದ ಕೊಟ್ಟಿಗೆ ನಿರ್ಮಾಣಕ್ಕೆ ಹೆಚ್ಚಿನ ಗಮನ ನೀಡಿರಲಿಲ್ಲ. ತಾಲ್ಲೂಕಿನಲ್ಲಿ ದನದ ಕೊಟ್ಟಿಗೆಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಇನ್ನುಮುಂದೆ ಆದ್ಯತೆಗೆ ಅನುಗುಣವಾಗಿ ಅನುಮೋದನೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.</p>.<p>ನರೇಗಾ ಯೋಜನೆಯಲ್ಲಿ ಸದಸ್ಯರು ಸಮುದಾಯ ಆಧಾರಿತ ಕೆಲಸಗಳಿಗೆ ಆದ್ಯತೆ ನೀಡಿದಲ್ಲಿ ಅಭಿವೃದ್ಧಿ ಸಾಧ್ಯ. ಗ್ರಾಮ ಪಂಚಾಯಿತಿಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಹೆಚ್ಚುವರಿ ಕ್ರಿಯಾ ಯೋಜನೆ ಕಳಿಸಿಕೊಟ್ಟಲ್ಲಿ ಶೀಘ್ರ ಅನುಮೋದನೆ ನೀಡಲಾಗುವುದು ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ 194 ಎಕರೆ ಜಮೀನನ್ನು ಗುರುತಿಸಿ ಅರ್ಹ ವಸತಿ ರಹಿತರಿಗೆ ನಿವೇಶನ ಹಂಚಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ ವ್ಯವಸ್ಥಿತವಾಗಿಲ್ಲದ ಕಾರಣ ಕಂದಾಯ ವಸೂಲಾತಿ ಆಗುತ್ತಿಲ್ಲ. ಶೀಘ್ರ ತಾಲ್ಲೂಕಿನಲ್ಲಿ ಇ- ಸ್ವತ್ತು ಅಭಿಯಾನ ಪ್ರಾರಂಭಿಸಿ, ಕಂದಾಯ ವಸೂಲಾತಿ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ, ನಿಯಮಾನುಸಾರ ಗ್ರಾಮ ಪಂಚಾಯಿತಿಗಳಿಗೆ ಬೇಕು-ಬೇಡಗಳನ್ನು ತೀರ್ಮಾನಿಸುವ ಅಧಿಕಾರವಿದೆ. ಎಲ್ಲಾ ವಿಚಾರಗಳಿಗೂ ಮೇಲಧಿಕಾರಿಗಳು ಮೂಗು ತೂರಿಸುವ ಮೂಲಕ ಜನಪ್ರತಿನಿಧಿಗಳ ಹಕ್ಕನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಇದ್ದಲ್ಲಿ ಕಾಮಗಾರಿಗೆ ಅಗತ್ಯ ಅನುದಾನವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.</p>.<p>ಕಾರ್ಯಾಗಾರದಲ್ಲಿ ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ ಹಾಗೂ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>