<p><strong>ಗುಬ್ಬಿ</strong>: ಪಟ್ಟಣದ ಬಂಗ್ಲೊಪಾಳ್ಯದ ಆದಿ ದ್ರಾವಿಡ ಸಮುದಾಯದವರು ವಾಸಿಸುತ್ತಿರುವ ವಸತಿ ಬಡಾವಣೆ ಮಧ್ಯೆ ಮುಸ್ಲಿಂ ಸಮುದಾಯದವರು ಪರವಾನಗಿ ಪಡೆಯದೆ ಮದರಸ ಹಾಗೂ ಮಸೀದಿ ನಿರ್ಮಾಣ ಮಾಡಲು ಮುಂದಾಗಿದ್ದರು. ರಾತ್ರೋರಾತ್ರಿ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿದ್ದನ್ನು ಸ್ಥಳೀಯರು ಪ್ರಶ್ನಿಸಿ ತಡೆಹಿಡಿದರು.<br> ಅಕ್ರಮ ಕಟ್ಟಡ ನಿರ್ಮಾಣ ಖಂಡಿಸಿ ಸ್ಥಳೀಯರು ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದರು.</p>.<p>ಮಂಗಳವಾರ ಎರಡೂ ಸಮುದಾಯಗಳ ಮುಖಂಡರ ಜೊತೆ ತಹಶೀಲ್ದಾರ್ ಆರತಿ ಬಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.</p>.<p>ಆದಿ ದ್ರಾವಿಡ ಸಮುದಾಯಕ್ಕೆ ಬಡಾವಣೆಯಲ್ಲಿ ನಿವೇಶನ ಹಂಚಲಾಗಿದೆ. ಈಗಾಗಲೇ ಅನೇಕರು ಮನೆ ಕಟ್ಟಿಕೊಂಡಿದ್ದಾರೆ. ಈ ಬಡಾವಣೆಯ ಸುತ್ತಮುತ್ತಲಿನಲ್ಲಿ ಮುಸ್ಲಿಮರು ವಾಸಮಾಡದೆ ಇದ್ದರೂ ಮದರಸ ಮತ್ತು ಮಸೀದಿ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕಟ್ಟಡ ನಿರ್ಮಿಸಲು ಪಿಲ್ಲರ್ ಹಾಕುವಾಗ ಅಕ್ಕಪಕ್ಕದ ಮನೆಗಳಿಗೆ ಹಾನಿ ಮಾಡಿದ್ದಾರೆ. ತಾಲ್ಲೂಕು ಆಡಳಿತ ಕ್ರಮ ಕೈಗೊಂಡು ತಡೆಹಿಡಿಯಬೇಕು ಎಂದು ಸಭೆಯಲ್ಲಿ ಸ್ಥಳೀಯರು ಒತ್ತಾಯಿಸಿದರು.</p>.<p>ಪರವಾನಗಿ ಪಡೆಯದೆ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ತಹಶೀಲ್ದಾರ್, ಮುಸ್ಲಿಂ ಸಮುದಾಯದ ಮುಖಂಡರನ್ನು ಪ್ರಶ್ನಿಸಿದರು. ಅಕ್ರಮವಾಗಿ ಕಟ್ಟಡ ಕಟ್ಟಲು ಮುಂದಾದಲ್ಲಿ ಕ್ರಮ ಕೈಗೊಳ್ಳಲಾಗುವುದು. ಗೊಂದಲಕ್ಕೆ ಆಸ್ಪದ ನೀಡದೇ ಸಮಸ್ಯೆ ಬಗೆಹರಿಯುವವರೆಗೂ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದ ನಂತರ ಮುಂದಿನ ಕ್ರಮ ಕೈಗೊಳ್ಳುವಂತೆ ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾ ದೇವಿ, ಮೊಹಮ್ಮದ್ ಸಾದಿಕ್, ಶೌಕತ್ ಆಲಿ, ಶ್ವೇತಾ, ಸುನಿಲ್ ಕುಮಾರ್, ಜಿ.ಎಚ್ ಜಗನ್ನಾಥ್, ಪರಿಶಿಷ್ಟ ಸಮುದಾಯದ ಮುಖಂಡರು ಹಾಗೂ ಮುಸ್ಲಿಂ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಪಟ್ಟಣದ ಬಂಗ್ಲೊಪಾಳ್ಯದ ಆದಿ ದ್ರಾವಿಡ ಸಮುದಾಯದವರು ವಾಸಿಸುತ್ತಿರುವ ವಸತಿ ಬಡಾವಣೆ ಮಧ್ಯೆ ಮುಸ್ಲಿಂ ಸಮುದಾಯದವರು ಪರವಾನಗಿ ಪಡೆಯದೆ ಮದರಸ ಹಾಗೂ ಮಸೀದಿ ನಿರ್ಮಾಣ ಮಾಡಲು ಮುಂದಾಗಿದ್ದರು. ರಾತ್ರೋರಾತ್ರಿ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿದ್ದನ್ನು ಸ್ಥಳೀಯರು ಪ್ರಶ್ನಿಸಿ ತಡೆಹಿಡಿದರು.<br> ಅಕ್ರಮ ಕಟ್ಟಡ ನಿರ್ಮಾಣ ಖಂಡಿಸಿ ಸ್ಥಳೀಯರು ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದರು.</p>.<p>ಮಂಗಳವಾರ ಎರಡೂ ಸಮುದಾಯಗಳ ಮುಖಂಡರ ಜೊತೆ ತಹಶೀಲ್ದಾರ್ ಆರತಿ ಬಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.</p>.<p>ಆದಿ ದ್ರಾವಿಡ ಸಮುದಾಯಕ್ಕೆ ಬಡಾವಣೆಯಲ್ಲಿ ನಿವೇಶನ ಹಂಚಲಾಗಿದೆ. ಈಗಾಗಲೇ ಅನೇಕರು ಮನೆ ಕಟ್ಟಿಕೊಂಡಿದ್ದಾರೆ. ಈ ಬಡಾವಣೆಯ ಸುತ್ತಮುತ್ತಲಿನಲ್ಲಿ ಮುಸ್ಲಿಮರು ವಾಸಮಾಡದೆ ಇದ್ದರೂ ಮದರಸ ಮತ್ತು ಮಸೀದಿ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕಟ್ಟಡ ನಿರ್ಮಿಸಲು ಪಿಲ್ಲರ್ ಹಾಕುವಾಗ ಅಕ್ಕಪಕ್ಕದ ಮನೆಗಳಿಗೆ ಹಾನಿ ಮಾಡಿದ್ದಾರೆ. ತಾಲ್ಲೂಕು ಆಡಳಿತ ಕ್ರಮ ಕೈಗೊಂಡು ತಡೆಹಿಡಿಯಬೇಕು ಎಂದು ಸಭೆಯಲ್ಲಿ ಸ್ಥಳೀಯರು ಒತ್ತಾಯಿಸಿದರು.</p>.<p>ಪರವಾನಗಿ ಪಡೆಯದೆ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ತಹಶೀಲ್ದಾರ್, ಮುಸ್ಲಿಂ ಸಮುದಾಯದ ಮುಖಂಡರನ್ನು ಪ್ರಶ್ನಿಸಿದರು. ಅಕ್ರಮವಾಗಿ ಕಟ್ಟಡ ಕಟ್ಟಲು ಮುಂದಾದಲ್ಲಿ ಕ್ರಮ ಕೈಗೊಳ್ಳಲಾಗುವುದು. ಗೊಂದಲಕ್ಕೆ ಆಸ್ಪದ ನೀಡದೇ ಸಮಸ್ಯೆ ಬಗೆಹರಿಯುವವರೆಗೂ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದ ನಂತರ ಮುಂದಿನ ಕ್ರಮ ಕೈಗೊಳ್ಳುವಂತೆ ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾ ದೇವಿ, ಮೊಹಮ್ಮದ್ ಸಾದಿಕ್, ಶೌಕತ್ ಆಲಿ, ಶ್ವೇತಾ, ಸುನಿಲ್ ಕುಮಾರ್, ಜಿ.ಎಚ್ ಜಗನ್ನಾಥ್, ಪರಿಶಿಷ್ಟ ಸಮುದಾಯದ ಮುಖಂಡರು ಹಾಗೂ ಮುಸ್ಲಿಂ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>