<p><strong>ಚಿಕ್ಕನಾಯಕನಹಳ್ಳಿ: </strong>ಕೊರೊನಾ ಲಕ್ಷಣಗಳು ಕಂಡು ಬಂದಾಗ ಆ ಪ್ರದೇಶವನ್ನು ಸೀಲ್ಡೌನ್ ಮಾಡಲಾಗುವುದು. ಆ ಭಾಗದ ಜನರು ಸರ್ಕಾರದ ಮುನ್ನೆಚ್ಚರಿಕೆಯ ಕ್ರಮಕ್ಕೆ ಸಹಕರಿಸದಿದ್ದರೆ ಯಾರೇ ಆಗಲಿ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಎಚ್ಚರಿಸಿದರು.</p>.<p>ತಾಲ್ಲೂಕಿನಲ್ಲಿ ಕೊರೊನಾ ಪ್ರಕರಗಳು ಹೆಚ್ಚಿರುವ ಗೋಡೆಕೆರೆ ಗೊಲ್ಲರಹಟ್ಟಿಗೆ ಭೇಟಿ ನೀಡಿ ಗ್ರಾಮಸ್ಥರ ಬಳಿ ಮಾತನಾಡಿದರು.</p>.<p>ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಒಂದೇ ದಿನ 5 ಪ್ರಕರಣಗಳು ಕಂಡು ಬಂದಿದ್ದವು. ಸೋಂಕಿತರ ಕರೆ ತರಲು ತಹಶೀಲ್ದಾರ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿತ್ತು. ಆಗ ಸೋಂಕಿತರು ತಹಶೀಲ್ದಾರ್ ವಿರುದ್ದ ಮಾತನಾಡಿದ್ದರು. ಈ ವಿಷಯವನ್ನು ತಹಶೀಲ್ದಾರರು ಸಚಿವರ ಹಾಗೂ ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದರು.</p>.<p>ಈ ಬಗ್ಗೆ ಗ್ರಾಮದಲ್ಲಿ ತಿಳಿವಳಿಕೆ ನೀಡಲು ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಡಿಎಚ್ಒ ನಾಗೇಂದ್ರಪ್ಪ, ತಿಪಟೂರು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಜೊತೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ: </strong>ಕೊರೊನಾ ಲಕ್ಷಣಗಳು ಕಂಡು ಬಂದಾಗ ಆ ಪ್ರದೇಶವನ್ನು ಸೀಲ್ಡೌನ್ ಮಾಡಲಾಗುವುದು. ಆ ಭಾಗದ ಜನರು ಸರ್ಕಾರದ ಮುನ್ನೆಚ್ಚರಿಕೆಯ ಕ್ರಮಕ್ಕೆ ಸಹಕರಿಸದಿದ್ದರೆ ಯಾರೇ ಆಗಲಿ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಎಚ್ಚರಿಸಿದರು.</p>.<p>ತಾಲ್ಲೂಕಿನಲ್ಲಿ ಕೊರೊನಾ ಪ್ರಕರಗಳು ಹೆಚ್ಚಿರುವ ಗೋಡೆಕೆರೆ ಗೊಲ್ಲರಹಟ್ಟಿಗೆ ಭೇಟಿ ನೀಡಿ ಗ್ರಾಮಸ್ಥರ ಬಳಿ ಮಾತನಾಡಿದರು.</p>.<p>ಗೋಡೆಕೆರೆ ಗೊಲ್ಲರಹಟ್ಟಿಯಲ್ಲಿ ಒಂದೇ ದಿನ 5 ಪ್ರಕರಣಗಳು ಕಂಡು ಬಂದಿದ್ದವು. ಸೋಂಕಿತರ ಕರೆ ತರಲು ತಹಶೀಲ್ದಾರ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿತ್ತು. ಆಗ ಸೋಂಕಿತರು ತಹಶೀಲ್ದಾರ್ ವಿರುದ್ದ ಮಾತನಾಡಿದ್ದರು. ಈ ವಿಷಯವನ್ನು ತಹಶೀಲ್ದಾರರು ಸಚಿವರ ಹಾಗೂ ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದರು.</p>.<p>ಈ ಬಗ್ಗೆ ಗ್ರಾಮದಲ್ಲಿ ತಿಳಿವಳಿಕೆ ನೀಡಲು ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಡಿಎಚ್ಒ ನಾಗೇಂದ್ರಪ್ಪ, ತಿಪಟೂರು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಜೊತೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>