ಮಾನದಂಡ: ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ಗಿಂತ ಹೆಚ್ಚಿನ ಒಣ ಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಹೊಂದಿದವರು, ಜೀವನೋಪಾಯಕ್ಕಾಗಿ ಸ್ವಂತ ಓಡಿಸಲು ವಾಣಿಜ್ಯ ವಾಹನ, ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬವನ್ನು ಹೊರತುಪಡಿಸಿ 4 ಚಕ್ರದ ವಾಹನ ಹೊಂದಿರುವ ಕುಟುಂಬಗಳು, ವಾರ್ಷಿಕ ₹1.20 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಅಂತ್ಯೋದಯ, ಬಿಪಿಎಲ್ ಕಾರ್ಡ್ ಪಡೆದುಕೊಂಡಿರಬಾರದು ಎಂದು ತಿಳಿಸಿದ್ದಾರೆ. 2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 6,40,081 ಕುಟುಂಬಗಳು ದಾಖಲಾಗಿದ್ದು, 49,389 ಅಂತ್ಯೋ ದಯ ಅನ್ನ, 6,12,331 ಆದ್ಯತಾ ಸೇರಿ ಟ್ಟು 6,61,720 ಕುಟುಂಬಗಳಿಗೆ ಬಿಪಿಎಲ್ ಪಡಿತರ ಚೀಟಿ ಹಾಗೂ 54,702 ಕುಟುಂಬಗಳಿಗೆ ಎಪಿಎಲ್ ಪಡಿತರ ಚೀಟಿ ನೀಡಲಾಗಿದೆ ಎಂದಿದ್ದಾರೆ.