ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಲುಚುಕಮ್ಮೆ ಬ್ರಾಹ್ಮಣರ ಸಂಘಟನೆಗೆ ಕ್ರಮ

ರಾಜ್ಯ ಸಮಿತಿಯ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಎಸ್.ಮಂಜುನಾಥ ಅಭಿಪ್ರಾಯ
Last Updated 20 ಜನವರಿ 2019, 15:45 IST
ಅಕ್ಷರ ಗಾತ್ರ

ತುಮಕೂರು: ರಾಜ್ಯಾದಾದ್ಯಂತ ವಿವಿಧೆಡೆ ನೆಲೆಸಿರುವ ಉಲುಚುಕಮ್ಮೆ ಬ್ರಾಹ್ಮಣ ಸಮುದಾಯದವರನ್ನು ಗುರುತಿಸಿ ಅವರನ್ನು ಸಭಾದ ಸದಸ್ಯರನ್ನಾಗಿಸಲು ಕಾರ್ಯ ರೂಪಿಸಲಾಗುತ್ತಿದೆ ಎಂದು ಉಲುಚುಕಮ್ಮೆ ಬ್ರಾಹ್ಮಣ ಸಭಾದ ನೂತನ ರಾಜ್ಯ ಘಟಕದ ಅಧ್ಯಕ್ಷ ಎಸ್.ಮಂಜುನಾಥ ತಿಳಿಸಿದರು.

ನಗರದ ಶಂಕರಮಠದಲ್ಲಿ ಜಿಲ್ಲಾ ಉಲುಚುಕಮ್ಮೆ ಬ್ರಾಹ್ಮಣ ಸಭಾದಿಂದ ಆಯೋಜಿಸಿದ್ದ ರಾಜ್ಯ ಸಮಿತಿಯ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭ ಹಾಗೂ ಉಲುಚುಕಮ್ಮೆ ಬ್ರಾಹ್ಮಣ ಸಭಾದ ಆನ್‌ಲೈನ್ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಿದರು.

ಬ್ರಾಹ್ಮಣ ವಿದ್ಯಾರ್ಥಿನಿಯರಿಗೆ ವ್ಯಾಸಂಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸುಸಜ್ಜಿತವಾದ ಮಹಿಳಾ ವಿದ್ಯಾರ್ಥಿ ನಿಲಯ ಸ್ಥಾಪನೆ ಆದ್ಯ ಕರ್ತವ್ಯವಾಗಿದೆ. ಬೆಂಗಳೂರಿನಲ್ಲಿರುವ ಹಾಲಿ ಇರುವ ಬಾಲಕರ ವಿದ್ಯಾರ್ಥಿ ನಿಲಯವನ್ನು ಉನ್ನತ ದರ್ಜೆಗೆ ಏರಿಸುವುದು, ಸುಸಜ್ಜಿತವಾದ ಸಭಾಂಗಣ ನಿರ್ಮಾಣ ಹಾಗೂ ಕಾಲೇಜು ಸ್ಥಾಪನೆ ತಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಉಲುಚುಕಮ್ಮೆ ಬ್ರಾಹ್ಮಣಸಭಾದ ಮಾಜಿ ಅಧ್ಯಕ್ಷ ವಿ.ಮಂಜುನಾಥ್, ಸಭಾದ ಕಾರ್ಯದರ್ಶಿ ಮುರಳೀಧರ ಶಾಸ್ತ್ರಿ, ಉಪಾಧ್ಯಕ್ಷ ಕೆ.ನರಸಿಂಹಮೂರ್ತಿ, ಗೌರವಾಧ್ಯಕ್ಷೆ ಇಂದಿರಮ್ಮ ಸುಂದರರಾವ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT