<p><strong>ಶಿರಾ</strong>: ತಾಲ್ಲೂಕಿಗೆ ಎತ್ತಿನಹೊಳೆ ನೀರಾವರಿ ಯೋಜನೆ ಮೂಲಕ ದೊರೆಯುವ ನೀರನ್ನು ದೊಡ್ಡ ಕೆರೆಗಳಿಗೆ ಹರಿಸಿ ಅಲ್ಲಿ ನೀರನ್ನು ಸಂಗ್ರಹಿಸಿ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ₹500 ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.</p>.<p>ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>.<p>ತಾಲೂಕಿನಲ್ಲಿ ಈಗಾಗಲೇ 145 ಕುಡಿಯುವ ನೀರಿನ ಟ್ಯಾಂಕ್ಗಳಿದ್ದು, ಇನ್ನು 265 ಟ್ಯಾಂಕ್ಗಳನ್ನು ನಿರ್ಮಾಣ ಮಾಡಿ ಸುಲಭವಾಗಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ₹500 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ಧಪಡಿಸಿ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರ ಕ್ರಿಯಾ ಯೋಜನೆಗೆ ಅನುಮತಿ ದೊರೆಯಲಿದೆ ಎಂದರು.</p>.<p>ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಆರ್.ಶಶಿಧರ್ ಗೌಡ ಮಾತನಾಡಿ, ಗೌಡಗೆರೆ ವ್ಯಾಪ್ತಿಯ ಹಲವು ಕೆರೆಗಳು ನೀರಾವರಿ ಸೌಲಭ್ಯದಿಂದ ವಂಚಿತವಾಗಿವೆ. ಭದ್ರ ಮೇಲ್ದಂಡೆ ಯೋಜನೆಯಲ್ಲಿ ಗೌಡಗೆರೆ ಸೇರಿ ಇತರ ಕೆರೆಗಳನ್ನು ಸೇರ್ಪಡೆ ಮಾಡುವ ಕೆಲಸವನ್ನು ಶಾಸಕ ಟಿ.ಬಿ.ಜಯಚಂದ್ರ ಮಾಡಬೇಕು ಎಂದರು.</p>.<p>ತಾಲೂಕು ಪಂಚಾಯಿತಿ ಇಒ ಹರೀಶ್ ಮಾತನಾಡಿ, ನರೇಗಾ ಯೋಜನೆಯಲ್ಲಿ ರೈತರಿಗೆ ಅನುಕೂಲವಾಗುವ ಹಾಗೂ ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗುವ ಕಾಮಗಾರಿಗಳನ್ನು ರೈತರು ಮತ್ತು ಜನಸಾಮಾನ್ಯರು ಕೈಗೊಳ್ಳುವ ಮೂಲಕ ಪ್ರಗತಿ ಸಾಧಿಸುವುದರ ಜತೆಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದರು.</p>.<p>ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಗೌಡಪ್ಪ, ಉಪಾಧ್ಯಕ್ಷೆ ಮಂಜುಳಾ ಗೌಡ, ಸದಸ್ಯರಾದ ಪುಷ್ಪಾ, ರಮಾಮಣಿ, ಡಿ.ತಿಪ್ಪೇಸ್ವಾಮಿ, ಕೆ.ಶಾಂತರಾಜು, ಕರಿಯಣ್ಣ, ಪಾರ್ವತಮ್ಮ, ಗಿರಿಜಮ್ಮ, ವಿವೇಕಾನಂದ, ಎಚ್.ಹನುಮಂತರಾಜು, ಪುಟ್ಟಮ್ಮ, ಮಮತಾ, ಟಿ.ಸುಮಲತಾ, ಸಿ.ಈಶ್ವರಪ್ಪ ಎನ್.ರಾಘವೇಂದ್ರ, ಗುಂಡಣ್ಣ, ಪಿಡಿಒ ಕೆ.ವೆಂಕಟೇಶಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ತಾಲ್ಲೂಕಿಗೆ ಎತ್ತಿನಹೊಳೆ ನೀರಾವರಿ ಯೋಜನೆ ಮೂಲಕ ದೊರೆಯುವ ನೀರನ್ನು ದೊಡ್ಡ ಕೆರೆಗಳಿಗೆ ಹರಿಸಿ ಅಲ್ಲಿ ನೀರನ್ನು ಸಂಗ್ರಹಿಸಿ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ₹500 ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.</p>.<p>ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>.<p>ತಾಲೂಕಿನಲ್ಲಿ ಈಗಾಗಲೇ 145 ಕುಡಿಯುವ ನೀರಿನ ಟ್ಯಾಂಕ್ಗಳಿದ್ದು, ಇನ್ನು 265 ಟ್ಯಾಂಕ್ಗಳನ್ನು ನಿರ್ಮಾಣ ಮಾಡಿ ಸುಲಭವಾಗಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ₹500 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ಧಪಡಿಸಿ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರ ಕ್ರಿಯಾ ಯೋಜನೆಗೆ ಅನುಮತಿ ದೊರೆಯಲಿದೆ ಎಂದರು.</p>.<p>ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಆರ್.ಶಶಿಧರ್ ಗೌಡ ಮಾತನಾಡಿ, ಗೌಡಗೆರೆ ವ್ಯಾಪ್ತಿಯ ಹಲವು ಕೆರೆಗಳು ನೀರಾವರಿ ಸೌಲಭ್ಯದಿಂದ ವಂಚಿತವಾಗಿವೆ. ಭದ್ರ ಮೇಲ್ದಂಡೆ ಯೋಜನೆಯಲ್ಲಿ ಗೌಡಗೆರೆ ಸೇರಿ ಇತರ ಕೆರೆಗಳನ್ನು ಸೇರ್ಪಡೆ ಮಾಡುವ ಕೆಲಸವನ್ನು ಶಾಸಕ ಟಿ.ಬಿ.ಜಯಚಂದ್ರ ಮಾಡಬೇಕು ಎಂದರು.</p>.<p>ತಾಲೂಕು ಪಂಚಾಯಿತಿ ಇಒ ಹರೀಶ್ ಮಾತನಾಡಿ, ನರೇಗಾ ಯೋಜನೆಯಲ್ಲಿ ರೈತರಿಗೆ ಅನುಕೂಲವಾಗುವ ಹಾಗೂ ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗುವ ಕಾಮಗಾರಿಗಳನ್ನು ರೈತರು ಮತ್ತು ಜನಸಾಮಾನ್ಯರು ಕೈಗೊಳ್ಳುವ ಮೂಲಕ ಪ್ರಗತಿ ಸಾಧಿಸುವುದರ ಜತೆಗೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದರು.</p>.<p>ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಗೌಡಪ್ಪ, ಉಪಾಧ್ಯಕ್ಷೆ ಮಂಜುಳಾ ಗೌಡ, ಸದಸ್ಯರಾದ ಪುಷ್ಪಾ, ರಮಾಮಣಿ, ಡಿ.ತಿಪ್ಪೇಸ್ವಾಮಿ, ಕೆ.ಶಾಂತರಾಜು, ಕರಿಯಣ್ಣ, ಪಾರ್ವತಮ್ಮ, ಗಿರಿಜಮ್ಮ, ವಿವೇಕಾನಂದ, ಎಚ್.ಹನುಮಂತರಾಜು, ಪುಟ್ಟಮ್ಮ, ಮಮತಾ, ಟಿ.ಸುಮಲತಾ, ಸಿ.ಈಶ್ವರಪ್ಪ ಎನ್.ರಾಘವೇಂದ್ರ, ಗುಂಡಣ್ಣ, ಪಿಡಿಒ ಕೆ.ವೆಂಕಟೇಶಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>