<p><strong>ಶಿರಾ: </strong>ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮುಚ್ಚುತ್ತಿರುವ ಕನ್ನಡ ಶಾಲೆಗಳನ್ನು ದತ್ತು ಸ್ವೀಕರಿಸಿ ಅಭಿವೃದ್ಧಿಗೆ ಯೋಜನಾಬದ್ಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶೈಲಾ ನಾಗರಾಜ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿರುವ ನನಗೆ ಕನ್ನಡ ನಾಡು, ನುಡಿಯ ಬಗ್ಗೆ ಅಪಾರ ಗೌರವವಿದೆ. ನಾಡು, ನುಡಿಯ ಸೇವೆ ಮಾಡಲು ನನ್ನನ್ನು ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು’ ಮನವಿ ಮಾಡಿದರು.</p>.<p>ಕನ್ನಡ ಭವನ ಇಲ್ಲದ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಭವನ ನಿರ್ಮಾಣದ ಜೊತೆಗೆ ಹೋಬಳಿ ಕೇಂದ್ರಗಳಲ್ಲಿ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು<br />ಎಂದರು.</p>.<p>ಬಯಲುಸೀಮೆಯ ರಂಗಾಯಣವನ್ನು ತುಮಕೂರಿಗೆ ತರಲು ಶ್ರಮಿಸಲಾಗುವುದು. ಜಿಲ್ಲೆಯ ಕಲೆ, ಸಾಹಿತ್ಯ, ಸಾಂಸ್ಕೃತಿಕ, ರಂಗಭೂಮಿ, ಸಿನಿಮಾ ಮಾಧ್ಯಮಗಳ ಪೂರ್ಣ ಮಾಹಿತಿ ಒಳಗೊಂಡ ಕಲಾ ಗ್ಯಾಲರಿಯನ್ನು ಜನಪ್ರತಿನಿಧಿಗಳು ಹಾಗೂ ಸಮಾನ ಮನಸ್ಕರ ಜೊತೆ ಸೇರಿ ನಿರ್ಮಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong>ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮುಚ್ಚುತ್ತಿರುವ ಕನ್ನಡ ಶಾಲೆಗಳನ್ನು ದತ್ತು ಸ್ವೀಕರಿಸಿ ಅಭಿವೃದ್ಧಿಗೆ ಯೋಜನಾಬದ್ಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶೈಲಾ ನಾಗರಾಜ್ ಹೇಳಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿರುವ ನನಗೆ ಕನ್ನಡ ನಾಡು, ನುಡಿಯ ಬಗ್ಗೆ ಅಪಾರ ಗೌರವವಿದೆ. ನಾಡು, ನುಡಿಯ ಸೇವೆ ಮಾಡಲು ನನ್ನನ್ನು ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು’ ಮನವಿ ಮಾಡಿದರು.</p>.<p>ಕನ್ನಡ ಭವನ ಇಲ್ಲದ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಭವನ ನಿರ್ಮಾಣದ ಜೊತೆಗೆ ಹೋಬಳಿ ಕೇಂದ್ರಗಳಲ್ಲಿ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು<br />ಎಂದರು.</p>.<p>ಬಯಲುಸೀಮೆಯ ರಂಗಾಯಣವನ್ನು ತುಮಕೂರಿಗೆ ತರಲು ಶ್ರಮಿಸಲಾಗುವುದು. ಜಿಲ್ಲೆಯ ಕಲೆ, ಸಾಹಿತ್ಯ, ಸಾಂಸ್ಕೃತಿಕ, ರಂಗಭೂಮಿ, ಸಿನಿಮಾ ಮಾಧ್ಯಮಗಳ ಪೂರ್ಣ ಮಾಹಿತಿ ಒಳಗೊಂಡ ಕಲಾ ಗ್ಯಾಲರಿಯನ್ನು ಜನಪ್ರತಿನಿಧಿಗಳು ಹಾಗೂ ಸಮಾನ ಮನಸ್ಕರ ಜೊತೆ ಸೇರಿ ನಿರ್ಮಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>