<p><strong>ಕುಣಿಗಲ್:</strong> ನಿವೃತ್ತ ನೌಕರರು ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆ ಗಮನಹರಿಸಿ, ‘ಮನ, ಮನೆ, ಮನಿ’ ಮತ್ತು ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಕೇಂದ್ರ ಸಮಿತಿ ಸಂಘಟನ ಕಾರ್ಯದರ್ಶಿ ಪ್ರಹ್ಲಾದ್ ಸಲಹೆ ನೀಡಿದರು.</p>.<p>ತಾಲ್ಲೂಕು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕೋತ್ಸವ ಮತ್ತು 75 ವರ್ಷ ಪೂರೈಸಿದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ರಾಜ್ಯದಲ್ಲಿ ಸರ್ಕಾರಿ ನೌಕರರಿಗಿಂತ ನಿವೃತ್ತ ಸರ್ಕಾರಿ ನೌಕರರು ಹೆಚ್ಚಾಗಿದ್ದಾರೆ. ಸಂಘಟಿತ ಹೋರಾಟದ ಫಲವಾಗಿ ಸವಲತ್ತುಗಳನ್ನು ಪಡೆದುಕೊಳ್ಳಲಾಗುತ್ತಿದ್ದು, ಸಂಘಟನೆ ಮತ್ತಷ್ಟೂ ಬಲವಾಗಬೇಕಿದೆ ಎಂದರು.</p>.<p>ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ನಿವೃತ್ತರಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಕುಟುಂಬದ ಸದಸ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡು, ಪ್ರವೃತ್ತಿಗಳನ್ನು ರೂಢಿಸಿಕೊಂಡು ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಶಿಸ್ತುಬದ್ಧ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಶತಾಯಿಷಿಗಳಾದ ವೈ.ಎ. ಶ್ರೀನಿವಾಸ್ ಶೆಟ್ಟಿ, 75 ವರ್ಷ ಪೂರೈಸಿದ ಹನುಮಂತಯ್ಯ, ಕೆಂಪೇಗೌಡ, ಕಾಡಯ್ಯ, ಮಾದಯ್ಯ, ರಂಗಮ್ಮ, ಜಯಮ್ಮ, ಶ್ರೀನಿವಾಸ್ ಮೂರ್ತಿ, ರಮಾಮಣಿ, ಕೆ.ಕೆ.ರಾಮಯ್ಯ, ಮುದ್ದಹನುಮಯ್ಯ ಅವರನ್ನು ಸತ್ಕರಿಸಲಾಯಿತು.</p>.<p>ತಾಲ್ಲೂಕು ಘಟಕದ ಗೌರವಾಧ್ಯಕ್ಷ ಕೆ.ಎ.ಪಿ.ಗುಪ್ತ, ಅಧ್ಯಕ್ಷ ಚನ್ನರಾಯಪ್ಪ, ಜಿಲ್ಲಾ ಘಟಕದ ಪುಟ್ಟನರಸಯ್ಯ, ಪದಾಧಿಕಾರಿಗಳಾದ ನಾರಾಯಣ್, ಕೆ.ಎಚ್.ನಾಗರಾಜು, ರಾಧಕೃಷ್ಣ, ಶಿವಮ್ಮ, ವಿಜಯ ಕುಮಾರ್, ಮಾಯಣ್ಣ ಮತ್ತು ನಿರ್ದೇಶಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ನಿವೃತ್ತ ನೌಕರರು ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆ ಗಮನಹರಿಸಿ, ‘ಮನ, ಮನೆ, ಮನಿ’ ಮತ್ತು ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಕೇಂದ್ರ ಸಮಿತಿ ಸಂಘಟನ ಕಾರ್ಯದರ್ಶಿ ಪ್ರಹ್ಲಾದ್ ಸಲಹೆ ನೀಡಿದರು.</p>.<p>ತಾಲ್ಲೂಕು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವಾರ್ಷಿಕೋತ್ಸವ ಮತ್ತು 75 ವರ್ಷ ಪೂರೈಸಿದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ರಾಜ್ಯದಲ್ಲಿ ಸರ್ಕಾರಿ ನೌಕರರಿಗಿಂತ ನಿವೃತ್ತ ಸರ್ಕಾರಿ ನೌಕರರು ಹೆಚ್ಚಾಗಿದ್ದಾರೆ. ಸಂಘಟಿತ ಹೋರಾಟದ ಫಲವಾಗಿ ಸವಲತ್ತುಗಳನ್ನು ಪಡೆದುಕೊಳ್ಳಲಾಗುತ್ತಿದ್ದು, ಸಂಘಟನೆ ಮತ್ತಷ್ಟೂ ಬಲವಾಗಬೇಕಿದೆ ಎಂದರು.</p>.<p>ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ನಿವೃತ್ತರಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಕುಟುಂಬದ ಸದಸ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡು, ಪ್ರವೃತ್ತಿಗಳನ್ನು ರೂಢಿಸಿಕೊಂಡು ಮಾನಸಿಕ ಮತ್ತು ದೈಹಿಕ ಸಮತೋಲನಕ್ಕೆ ಶಿಸ್ತುಬದ್ಧ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಶತಾಯಿಷಿಗಳಾದ ವೈ.ಎ. ಶ್ರೀನಿವಾಸ್ ಶೆಟ್ಟಿ, 75 ವರ್ಷ ಪೂರೈಸಿದ ಹನುಮಂತಯ್ಯ, ಕೆಂಪೇಗೌಡ, ಕಾಡಯ್ಯ, ಮಾದಯ್ಯ, ರಂಗಮ್ಮ, ಜಯಮ್ಮ, ಶ್ರೀನಿವಾಸ್ ಮೂರ್ತಿ, ರಮಾಮಣಿ, ಕೆ.ಕೆ.ರಾಮಯ್ಯ, ಮುದ್ದಹನುಮಯ್ಯ ಅವರನ್ನು ಸತ್ಕರಿಸಲಾಯಿತು.</p>.<p>ತಾಲ್ಲೂಕು ಘಟಕದ ಗೌರವಾಧ್ಯಕ್ಷ ಕೆ.ಎ.ಪಿ.ಗುಪ್ತ, ಅಧ್ಯಕ್ಷ ಚನ್ನರಾಯಪ್ಪ, ಜಿಲ್ಲಾ ಘಟಕದ ಪುಟ್ಟನರಸಯ್ಯ, ಪದಾಧಿಕಾರಿಗಳಾದ ನಾರಾಯಣ್, ಕೆ.ಎಚ್.ನಾಗರಾಜು, ರಾಧಕೃಷ್ಣ, ಶಿವಮ್ಮ, ವಿಜಯ ಕುಮಾರ್, ಮಾಯಣ್ಣ ಮತ್ತು ನಿರ್ದೇಶಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>