<p><strong>ತುಮಕೂರು</strong>: ನಗರೀಕರಣ, ಕೈಗಾರಿಕೀಕರಣದ ಹೆಸರಿನಲ್ಲಿ ಜಲಮೂಲ, ನದಿಪಾತ್ರ ಬರಿದು ಮಾಡಿದರೆ ಮನುಕುಲ ಸೇರಿದಂತೆ ಇಡೀ ಜೀವ ಸಂಕುಲವೇ ಅಪಾಯಕ್ಕೆ ಸಿಲುಕಲಿದೆ ಎಂದು ಜಲಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯದರ್ಶಿ ಕೆ.ಜೈಪ್ರಕಾಶ್ ಎಚ್ಚರಿಸಿದರು.</p>.<p>ನಗರದ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಎಂಜಿನಿಯರುಗಳ ಸಂಸ್ಥೆ (ಐಇಐ) ಸಹಯೋಗದಲ್ಲಿ ‘ಉತ್ತಮ ಜಗತ್ತು ರೂಪಿಸಲು ಸ್ಮಾರ್ಟ್ ಎಂಜಿನಿಯರಿಂಗ್ ಹಾಗೂ ರಾಜ್ಯದ ನೀರಿನ ಪರಿಸ್ಥಿತಿ’ ಕುರಿತು ಮಾತನಾಡಿದರು.</p>.<p>ಜನಸಂಖ್ಯೆ ಬೆಳೆಯುತ್ತಲೇ ಸಾಗಿದ್ದು, ನೀರಿಗೆ ಬೇಡಿಕೆ ಹೆಚ್ಚುತ್ತಿದೆ. ಇರುವ ಜಲಮೂಲವನ್ನು ಮಾಲಿನ್ಯ ರಹಿತವಾಗಿ ಸಂರಕ್ಷಿಸಿ ಸದ್ಬಳಕೆ ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಎಂಜಿನಿಯರುಗಳ ಪಾತ್ರ ಪ್ರಮುಖವಾಗಿದೆ. ನೀರಿನ ಸಂರಕ್ಷಣೆ ವಿಚಾರದಲ್ಲಿ ಎಚ್ಚರಿಕೆಯಿಂದ ಯೋಜನೆ ರೂಪಿಸಿ ಕಾರ್ಯ ರೂಪಕ್ಕೆ ತರಬೇಕು ಎಂದರು.</p>.<p>ಎಸ್ಐಟಿ ಸಿಇಒ ಶಿವಕುಮಾರಯ್ಯ, ಪ್ರಾಂಶುಪಾಲ ಪ್ರೊ.ಎಸ್.ವಿ.ದಿನೇಶ್, ಐಇಐ ಅಧ್ಯಕ್ಷ ಆರ್.ಸುರೇಶ್, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಪವನ್ ಕುಮಾರ್, ಆನಂದ್, ಮಾದವ್, ಗಣೇಶ್, ತಿರುಮಲೇಶ್ ಉಪಸ್ಥಿತರಿದ್ದರು. ಪವನ್ಕುಮಾರ್ ಯಮ್ನಿ ಸ್ವಾಗತಿಸಿ, ರೂಪ ನಿರೂಪಿಸಿ ಎನ್.ಚಕ್ರವರ್ತಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಗರೀಕರಣ, ಕೈಗಾರಿಕೀಕರಣದ ಹೆಸರಿನಲ್ಲಿ ಜಲಮೂಲ, ನದಿಪಾತ್ರ ಬರಿದು ಮಾಡಿದರೆ ಮನುಕುಲ ಸೇರಿದಂತೆ ಇಡೀ ಜೀವ ಸಂಕುಲವೇ ಅಪಾಯಕ್ಕೆ ಸಿಲುಕಲಿದೆ ಎಂದು ಜಲಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯದರ್ಶಿ ಕೆ.ಜೈಪ್ರಕಾಶ್ ಎಚ್ಚರಿಸಿದರು.</p>.<p>ನಗರದ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಎಂಜಿನಿಯರುಗಳ ಸಂಸ್ಥೆ (ಐಇಐ) ಸಹಯೋಗದಲ್ಲಿ ‘ಉತ್ತಮ ಜಗತ್ತು ರೂಪಿಸಲು ಸ್ಮಾರ್ಟ್ ಎಂಜಿನಿಯರಿಂಗ್ ಹಾಗೂ ರಾಜ್ಯದ ನೀರಿನ ಪರಿಸ್ಥಿತಿ’ ಕುರಿತು ಮಾತನಾಡಿದರು.</p>.<p>ಜನಸಂಖ್ಯೆ ಬೆಳೆಯುತ್ತಲೇ ಸಾಗಿದ್ದು, ನೀರಿಗೆ ಬೇಡಿಕೆ ಹೆಚ್ಚುತ್ತಿದೆ. ಇರುವ ಜಲಮೂಲವನ್ನು ಮಾಲಿನ್ಯ ರಹಿತವಾಗಿ ಸಂರಕ್ಷಿಸಿ ಸದ್ಬಳಕೆ ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಎಂಜಿನಿಯರುಗಳ ಪಾತ್ರ ಪ್ರಮುಖವಾಗಿದೆ. ನೀರಿನ ಸಂರಕ್ಷಣೆ ವಿಚಾರದಲ್ಲಿ ಎಚ್ಚರಿಕೆಯಿಂದ ಯೋಜನೆ ರೂಪಿಸಿ ಕಾರ್ಯ ರೂಪಕ್ಕೆ ತರಬೇಕು ಎಂದರು.</p>.<p>ಎಸ್ಐಟಿ ಸಿಇಒ ಶಿವಕುಮಾರಯ್ಯ, ಪ್ರಾಂಶುಪಾಲ ಪ್ರೊ.ಎಸ್.ವಿ.ದಿನೇಶ್, ಐಇಐ ಅಧ್ಯಕ್ಷ ಆರ್.ಸುರೇಶ್, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಪವನ್ ಕುಮಾರ್, ಆನಂದ್, ಮಾದವ್, ಗಣೇಶ್, ತಿರುಮಲೇಶ್ ಉಪಸ್ಥಿತರಿದ್ದರು. ಪವನ್ಕುಮಾರ್ ಯಮ್ನಿ ಸ್ವಾಗತಿಸಿ, ರೂಪ ನಿರೂಪಿಸಿ ಎನ್.ಚಕ್ರವರ್ತಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>