<p><strong>ತಿಪಟೂರು:</strong> ನೀರು ಅಮೂಲ್ಯ ಸಂಪತ್ತು. ನೀರನ್ನು ಉಳಿಸಿ, ಅಂತರ್ಜಲ ವೃದ್ಧಿಸುವ ಕಾರ್ಯ ಮಾಡಬೇಕು ಎಂದು ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಜಗದೀಶ್ ಹೇಳಿದರು.</p>.<p>ನಗರದ ಕಲ್ಪತರು ವಿದ್ಯಾಸಂಸ್ಥೆ ಆವರಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಿಂದ ನಡೆದ ಮಳೆ ನೀರು ಸಂರಕ್ಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರತಿ ಜೀವಿಗೂ ನೀರು ಅಗತ್ಯ. ನೀರಿನ ಸಮರ್ಪಕ ಮರುಬಳಕೆ ಅನಿವಾರ್ಯ. ಇತ್ತೀಚಿನ ದಿನಗಳಲ್ಲಿ ಪರಿಸರದಲ್ಲಿನ ಗಿಡ-ಮರಗಳ ಸಂಖ್ಯೆ ಕ್ಷೀಣಿಸುತ್ತಿದೆ. ಮಳೆಯ ಪ್ರಮಾಣ ಕಡಿಮೆ ಆಗುತ್ತಿದೆ. ಇಸ್ರೇಲ್ನಲ್ಲಿ ಸಮುದ್ರದ ನೀರನ್ನು ಶುದ್ಧೀಕರಿಸಿ ವಿವಿಧ ಉಪಯೋಗಕ್ಕೆ ಬಳಸಲಾಗುತ್ತಿದೆ. ಭಾರತದಲ್ಲಿಯೂ ಆ ಮಾದರಿ ಬಂದರೆ ಅಚ್ಚರಿ ಪಡುವಂತಿಲ್ಲ ಎಂದರು.</p>.<p>ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾಧಿಕಾರಿ ಸಿ.ಎಂ.ಎಸ್. ಲೋಕೇಶ್ವರಯ್ಯ ಮಾತನಾಡಿ, ಪ್ರತಿ ಗ್ರಾಮಗಳಲ್ಲಿನ ಯುವಜನರು ಜಾಗೃತರಾಗುತ್ತಿದ್ದಾರೆ. ಗಿಡ-ಮರ ಬೆಳೆಸುವ ಸಂರಕ್ಷಿಸುತ್ತಿದ್ದಾರೆ. ನೀರಿನ ಮೂಲ ಸಂರಕ್ಷಿಸಿ ತೋಟಗಳಲ್ಲಿ ಇಂಗು ಗುಂಡಿಗಳ ನಿರ್ಮಾಣ ಮೂಲಕ ಅಂತರ್ಜಲ ವೃದ್ಧಿಗೆ ಯೋಜನೆ ರೂಪಿಸಿದ್ದಾರೆ. ಪ್ರಾಣಿ-ಪಕ್ಷಿಗಳಿಗೆ ಅನುಕೂಲವಾಗುವಂತೆ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿ ನೀರನ್ನು ನೀಡುವ ಜೊತೆಗೆ ಕಡಿಮೆ ಪ್ರಮಾಣದಲ್ಲಿ ನೀರನ್ನು ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದರು.</p>.<p>ಕಾಲೇಜಿನ ಆವರಣದಲ್ಲಿ ಎನ್ಎಸ್ಎಸ್ ಸ್ವಯಂ ಸೇವಕ ವಿದ್ಯಾರ್ಥಿಗಳು ನೆಡುತೋಪುಗಳಲ್ಲಿ ಸಣ್ಣ-ಸಣ್ಣ ಇಂಗುಗುಂಡಿ ನಿರ್ಮಿಸಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಗಳಾದ ಶ್ರೀನಿವಾಸ್ ಬಿ., ಎಂ.ಸಿ.ಯೋಗಾನಂದ, ಹಿರಿಯ ಪ್ರಾಧ್ಯಾಪಕ ಎಚ್.ಆರ್.ಧನಂಜಯ, ದಿಲೀಪ್ ಷಾ, ಡಾ.ಲಲಟಾಕ್ಷಮೂರ್ತಿ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ನೀರು ಅಮೂಲ್ಯ ಸಂಪತ್ತು. ನೀರನ್ನು ಉಳಿಸಿ, ಅಂತರ್ಜಲ ವೃದ್ಧಿಸುವ ಕಾರ್ಯ ಮಾಡಬೇಕು ಎಂದು ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಜಗದೀಶ್ ಹೇಳಿದರು.</p>.<p>ನಗರದ ಕಲ್ಪತರು ವಿದ್ಯಾಸಂಸ್ಥೆ ಆವರಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಿಂದ ನಡೆದ ಮಳೆ ನೀರು ಸಂರಕ್ಷಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರತಿ ಜೀವಿಗೂ ನೀರು ಅಗತ್ಯ. ನೀರಿನ ಸಮರ್ಪಕ ಮರುಬಳಕೆ ಅನಿವಾರ್ಯ. ಇತ್ತೀಚಿನ ದಿನಗಳಲ್ಲಿ ಪರಿಸರದಲ್ಲಿನ ಗಿಡ-ಮರಗಳ ಸಂಖ್ಯೆ ಕ್ಷೀಣಿಸುತ್ತಿದೆ. ಮಳೆಯ ಪ್ರಮಾಣ ಕಡಿಮೆ ಆಗುತ್ತಿದೆ. ಇಸ್ರೇಲ್ನಲ್ಲಿ ಸಮುದ್ರದ ನೀರನ್ನು ಶುದ್ಧೀಕರಿಸಿ ವಿವಿಧ ಉಪಯೋಗಕ್ಕೆ ಬಳಸಲಾಗುತ್ತಿದೆ. ಭಾರತದಲ್ಲಿಯೂ ಆ ಮಾದರಿ ಬಂದರೆ ಅಚ್ಚರಿ ಪಡುವಂತಿಲ್ಲ ಎಂದರು.</p>.<p>ರಾಷ್ಟ್ರೀಯ ಸೇವಾ ಯೋಜನೆ ಶಿಬಿರಾಧಿಕಾರಿ ಸಿ.ಎಂ.ಎಸ್. ಲೋಕೇಶ್ವರಯ್ಯ ಮಾತನಾಡಿ, ಪ್ರತಿ ಗ್ರಾಮಗಳಲ್ಲಿನ ಯುವಜನರು ಜಾಗೃತರಾಗುತ್ತಿದ್ದಾರೆ. ಗಿಡ-ಮರ ಬೆಳೆಸುವ ಸಂರಕ್ಷಿಸುತ್ತಿದ್ದಾರೆ. ನೀರಿನ ಮೂಲ ಸಂರಕ್ಷಿಸಿ ತೋಟಗಳಲ್ಲಿ ಇಂಗು ಗುಂಡಿಗಳ ನಿರ್ಮಾಣ ಮೂಲಕ ಅಂತರ್ಜಲ ವೃದ್ಧಿಗೆ ಯೋಜನೆ ರೂಪಿಸಿದ್ದಾರೆ. ಪ್ರಾಣಿ-ಪಕ್ಷಿಗಳಿಗೆ ಅನುಕೂಲವಾಗುವಂತೆ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿ ನೀರನ್ನು ನೀಡುವ ಜೊತೆಗೆ ಕಡಿಮೆ ಪ್ರಮಾಣದಲ್ಲಿ ನೀರನ್ನು ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದರು.</p>.<p>ಕಾಲೇಜಿನ ಆವರಣದಲ್ಲಿ ಎನ್ಎಸ್ಎಸ್ ಸ್ವಯಂ ಸೇವಕ ವಿದ್ಯಾರ್ಥಿಗಳು ನೆಡುತೋಪುಗಳಲ್ಲಿ ಸಣ್ಣ-ಸಣ್ಣ ಇಂಗುಗುಂಡಿ ನಿರ್ಮಿಸಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಗಳಾದ ಶ್ರೀನಿವಾಸ್ ಬಿ., ಎಂ.ಸಿ.ಯೋಗಾನಂದ, ಹಿರಿಯ ಪ್ರಾಧ್ಯಾಪಕ ಎಚ್.ಆರ್.ಧನಂಜಯ, ದಿಲೀಪ್ ಷಾ, ಡಾ.ಲಲಟಾಕ್ಷಮೂರ್ತಿ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>