<p><strong>ಮಧುಗಿರಿ:</strong> ಹೈನುಗಾರರು ಶುದ್ಧವಾದ ಹಾಲನ್ನು ಸರಬರಾಜು ಮಾಡುವ ಮೂಲಕ ಮಾರುಕಟ್ಟೆ ವಿಸ್ತರಿಸಲು ಸಹಕಾರ ನೀಡಬೇಕು ಎಂದು ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ಹೊರವಲಯದಲ್ಲಿರುವ ಶೀತಲ ಕೇಂದ್ರದ ಸಭಾಂಗಣದಲ್ಲಿ ಹೈನುಗಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಹಕಾರ ಸಂಘಗಳು ಆರ್ಥಿಕವಾಗಿ ಲಾಭಗಳಿಸಿದರೆ ಸದಸ್ಯರಿಗೆ ಹೆಚ್ಚು ಅನುಕೂಲವಾಗುತ್ತದೆ. ಆದ್ದರಿಂದ ಹೈನುಗಾರರು ಗುಣಮಟ್ಟದ ಹಾಲು ಪೂರೈಸಬೇಕು. ಉತ್ತಮ ಅಂಕಗಳಿಸುವ ಹೈನುಗಾರರ ಮಕ್ಕಳಿಗೆ ಪ್ರತಿ ವರ್ಷ ಸನ್ಮಾನಿಸಲಾಗುತ್ತಿದೆ ಎಂದರು.</p>.<p>ಜಿ.ಪಂ ಸದಸ್ಯ ಎಚ್. ಕೆಂಚಮಾರಯ್ಯ ಮಾತನಾಡಿ, ‘ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ಸಮಾಜ ಮುಖಿಯಾಗಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಿನರಸಯ್ಯ, ಸದಸ್ಯ ದೊಡ್ಡಯ್ಯ, ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್, ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್ ಬಾಬು, ನಟರಾಜು, ಮುಖಂಡ ಸಿದ್ದಣ್ಣ, ಆರ್.ಎ.ನಾರಾಯಣ್, ಹನುಮಂತರಾಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ಹೈನುಗಾರರು ಶುದ್ಧವಾದ ಹಾಲನ್ನು ಸರಬರಾಜು ಮಾಡುವ ಮೂಲಕ ಮಾರುಕಟ್ಟೆ ವಿಸ್ತರಿಸಲು ಸಹಕಾರ ನೀಡಬೇಕು ಎಂದು ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ಹೊರವಲಯದಲ್ಲಿರುವ ಶೀತಲ ಕೇಂದ್ರದ ಸಭಾಂಗಣದಲ್ಲಿ ಹೈನುಗಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಹಕಾರ ಸಂಘಗಳು ಆರ್ಥಿಕವಾಗಿ ಲಾಭಗಳಿಸಿದರೆ ಸದಸ್ಯರಿಗೆ ಹೆಚ್ಚು ಅನುಕೂಲವಾಗುತ್ತದೆ. ಆದ್ದರಿಂದ ಹೈನುಗಾರರು ಗುಣಮಟ್ಟದ ಹಾಲು ಪೂರೈಸಬೇಕು. ಉತ್ತಮ ಅಂಕಗಳಿಸುವ ಹೈನುಗಾರರ ಮಕ್ಕಳಿಗೆ ಪ್ರತಿ ವರ್ಷ ಸನ್ಮಾನಿಸಲಾಗುತ್ತಿದೆ ಎಂದರು.</p>.<p>ಜಿ.ಪಂ ಸದಸ್ಯ ಎಚ್. ಕೆಂಚಮಾರಯ್ಯ ಮಾತನಾಡಿ, ‘ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ ಸಮಾಜ ಮುಖಿಯಾಗಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಿನರಸಯ್ಯ, ಸದಸ್ಯ ದೊಡ್ಡಯ್ಯ, ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್, ಎಂ.ಆರ್.ಜಗನ್ನಾಥ್, ಎಂ.ಎಸ್.ಚಂದ್ರಶೇಖರ್ ಬಾಬು, ನಟರಾಜು, ಮುಖಂಡ ಸಿದ್ದಣ್ಣ, ಆರ್.ಎ.ನಾರಾಯಣ್, ಹನುಮಂತರಾಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>