<p><strong>ಗುಬ್ಬಿ:</strong> ‘ಕಕ್ಷಿದಾರರ ಹಣ, ಸಮಯ ಉಳಿಸುವ ಜೊತೆಗೆ ತ್ವರಿತ ನ್ಯಾಯ ಒದಗಿಸುವ ಉದ್ದೇಶದಿಂದ ಡಿ. 18ರಂದು ಬೃಹತ್ ಲೋಕ ಅದಾಲತ್ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.</p>.<p>ಮಂಗಳವಾರ ಪಟ್ಟಣದ ನ್ಯಾಯಾಲಯದಲ್ಲಿ ಲೋಕ ಅದಾಲತ್ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವುದೇ ಕಾನೂನು ಸೇವಾ ಪ್ರಾಧಿಕಾರದ ಗುರಿ. ಕಕ್ಷಿದಾರರು ನ್ಯಾಯಾಲಯದಲ್ಲಿ ವರ್ಷಗಟ್ಟಲೆ ಅಲೆದರೂ ಪರಿಹಾರ ವಿಳಂಬವಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನತಾ ನ್ಯಾಯಾಲಯಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜನತಾ ನ್ಯಾಯಾಲಯದಲ್ಲಿ ಎಲ್ಲಾ ರೀತಿಯ ಸಿವಿಲ್ ಸ್ವರೂಪದ ವ್ಯಾಜ್ಯಗಳ ಜೊತೆಗೆ ಸಂಧಾನ ಮಾಡಬಹುದಾದ ಕ್ರಿಮಿನಲ್ ದಾವೆಗಳನ್ನು ಇತ್ಯರ್ಥಗೊಳಿಸಲಾಗುವುದು. ಎಲ್ಲಾ ಇಲಾಖೆಯ ಮುಖ್ಯಸ್ಥರನ್ನು ಕರೆಸಿ ಇಲಾಖೆಗಳಿಗೆ ಸಂಬಂಧಿಸಿದ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.</p>.<p>ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚಿಸಿ ಸಾಲ ತೀರುವಳಿ ವ್ಯಾಜ್ಯಗಳನ್ನು ಬಗೆಹರಿಸಲಾಗುವುದು. ಹೇಮಾವತಿ ಭೂಸ್ವಾಧೀನಾಧಿಕಾರಿ ಜೊತೆ ಚರ್ಚಿಸಿ ₹ 5 ಲಕ್ಷಕ್ಕಿಂತ ಕಡಿಮೆ ಇರುವ ಪರಿಹಾರವನ್ನು ತಕ್ಷಣ ಭೂಮಿ ಕಳೆದುಕೊಂಡವರಿಗೆ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಜೊತೆಗೆ ವಿವಾಹ ವಿಚ್ಛೇದನ, ವಾಹನ ಅಪಘಾತ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.</p>.<p>ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನ್ಯಾಯಾಂಗ ಇಲಾಖೆಯು ಉತ್ತಮ ನಿರ್ಧಾರ ಕೈಗೊಂಡಿದೆ. ವಕೀಲರು ತಮ್ಮ ಕಕ್ಷಿದಾರರ ಮನವೊಲಿಸಿ ರಾಜೀ ಸಂಧಾನದ ಮೂಲಕ ಹೆಚ್ಚು ದಾವೆಗಳ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.</p>.<p>ನ್ಯಾಯಾಧೀಶರಾದ ಶಿವರಾಜ್ ವಿ. ಸಿದ್ದೇಶ್ವರ್, ಪ್ರೇಮ್ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ನಾರಾಯಣ್<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ‘ಕಕ್ಷಿದಾರರ ಹಣ, ಸಮಯ ಉಳಿಸುವ ಜೊತೆಗೆ ತ್ವರಿತ ನ್ಯಾಯ ಒದಗಿಸುವ ಉದ್ದೇಶದಿಂದ ಡಿ. 18ರಂದು ಬೃಹತ್ ಲೋಕ ಅದಾಲತ್ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.</p>.<p>ಮಂಗಳವಾರ ಪಟ್ಟಣದ ನ್ಯಾಯಾಲಯದಲ್ಲಿ ಲೋಕ ಅದಾಲತ್ ಬಗ್ಗೆ ಅವರು ಮಾಹಿತಿ ನೀಡಿದರು.</p>.<p>ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವುದೇ ಕಾನೂನು ಸೇವಾ ಪ್ರಾಧಿಕಾರದ ಗುರಿ. ಕಕ್ಷಿದಾರರು ನ್ಯಾಯಾಲಯದಲ್ಲಿ ವರ್ಷಗಟ್ಟಲೆ ಅಲೆದರೂ ಪರಿಹಾರ ವಿಳಂಬವಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನತಾ ನ್ಯಾಯಾಲಯಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜನತಾ ನ್ಯಾಯಾಲಯದಲ್ಲಿ ಎಲ್ಲಾ ರೀತಿಯ ಸಿವಿಲ್ ಸ್ವರೂಪದ ವ್ಯಾಜ್ಯಗಳ ಜೊತೆಗೆ ಸಂಧಾನ ಮಾಡಬಹುದಾದ ಕ್ರಿಮಿನಲ್ ದಾವೆಗಳನ್ನು ಇತ್ಯರ್ಥಗೊಳಿಸಲಾಗುವುದು. ಎಲ್ಲಾ ಇಲಾಖೆಯ ಮುಖ್ಯಸ್ಥರನ್ನು ಕರೆಸಿ ಇಲಾಖೆಗಳಿಗೆ ಸಂಬಂಧಿಸಿದ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.</p>.<p>ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚಿಸಿ ಸಾಲ ತೀರುವಳಿ ವ್ಯಾಜ್ಯಗಳನ್ನು ಬಗೆಹರಿಸಲಾಗುವುದು. ಹೇಮಾವತಿ ಭೂಸ್ವಾಧೀನಾಧಿಕಾರಿ ಜೊತೆ ಚರ್ಚಿಸಿ ₹ 5 ಲಕ್ಷಕ್ಕಿಂತ ಕಡಿಮೆ ಇರುವ ಪರಿಹಾರವನ್ನು ತಕ್ಷಣ ಭೂಮಿ ಕಳೆದುಕೊಂಡವರಿಗೆ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಜೊತೆಗೆ ವಿವಾಹ ವಿಚ್ಛೇದನ, ವಾಹನ ಅಪಘಾತ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.</p>.<p>ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನ್ಯಾಯಾಂಗ ಇಲಾಖೆಯು ಉತ್ತಮ ನಿರ್ಧಾರ ಕೈಗೊಂಡಿದೆ. ವಕೀಲರು ತಮ್ಮ ಕಕ್ಷಿದಾರರ ಮನವೊಲಿಸಿ ರಾಜೀ ಸಂಧಾನದ ಮೂಲಕ ಹೆಚ್ಚು ದಾವೆಗಳ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.</p>.<p>ನ್ಯಾಯಾಧೀಶರಾದ ಶಿವರಾಜ್ ವಿ. ಸಿದ್ದೇಶ್ವರ್, ಪ್ರೇಮ್ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ಜಿ. ನಾರಾಯಣ್<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>