<p><strong>ತುಮಕೂರು</strong>: ಕೋವಿಡ್-19 ಪ್ರಕರಣಗಳು ಹೆಚ್ಚದಂತೆ ನಿಯಂತ್ರಿಸಲು ನಿತ್ಯ 6 ಸಾವಿರ ಮಂದಿಗೆ ಪರೀಕ್ಷೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧು ಸ್ವಾಮಿ ಸೋಮವಾರ ಸೂಚಿಸಿದರು.</p>.<p>ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ‘ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸಬೇಕು’ ಎಂದರು.</p>.<p>ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂಬ ಭಾವನೆಯಲ್ಲಿ ಕೋವಿಡ್ ಪರೀಕ್ಷೆ ಕಡಿಮೆ ಮಾಡಬಾರದು. ಈ ಹಿಂದಿಗಿಂತಲೂ ಹೆಚ್ಚಾಗಿ ಪರೀಕ್ಷೆ ಮಾಡಬೇಕು. ಇದರಿಂದ ನಿರೀಕ್ಷೆಗೂ ಮೀರಿ ನಿಯಂತ್ರಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದರು.</p>.<p>ಈಗಾಗಲೇ, ಗುರುತಿಸಿರುವ ಕೆಂಪು ವಲಯ ಮತ್ತು ಹಾಟ್ಸ್ಪಾಟ್ ಪ್ರದೇಶಗಳಲ್ಲಿನ ಸೋಂಕಿತರ ಕುಟುಂಬಸ್ಥರನ್ನು ಪರೀಕ್ಷೆಗೆ ಒಳಪಡಿಸುವಂತೆ ಡಿಎಚ್ಒ ಡಾ.ನಾಗೇಂದ್ರಪ್ಪಗೆ ಸೂಚಿಸಿದರು.</p>.<p>ಶಿರಾ ಆಸ್ಪತ್ರೆಗೆ ಆಮ್ಲಜನಕ ಸಾಂದ್ರಕಗಳ ಅವಶ್ಯಕತೆ ಇರುವ ಬಗ್ಗೆ ಶಾಸಕ ರಾಜೇಶ್ ಗೌಡ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ದಾನಿಗಳು ಆಮ್ಲಜನಕ ಸಾಂದ್ರಕಗಳನ್ನು ನೀಡಿದ್ದು, ಶಿರಾ ಆಸ್ಪತ್ರೆಗೆ ಒದಗಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.</p>.<p>ಶಾಸಕ ಮಸಾಲ ಜಯರಾಂ, ‘ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಣೆಯಾಗುತ್ತಿಲ್ಲ’ ಎಂದು ದೂರಿ ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸ್ವಚ್ಛತಾ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕೋವಿಡ್-19 ಪ್ರಕರಣಗಳು ಹೆಚ್ಚದಂತೆ ನಿಯಂತ್ರಿಸಲು ನಿತ್ಯ 6 ಸಾವಿರ ಮಂದಿಗೆ ಪರೀಕ್ಷೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧು ಸ್ವಾಮಿ ಸೋಮವಾರ ಸೂಚಿಸಿದರು.</p>.<p>ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ‘ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸಬೇಕು’ ಎಂದರು.</p>.<p>ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ ಎಂಬ ಭಾವನೆಯಲ್ಲಿ ಕೋವಿಡ್ ಪರೀಕ್ಷೆ ಕಡಿಮೆ ಮಾಡಬಾರದು. ಈ ಹಿಂದಿಗಿಂತಲೂ ಹೆಚ್ಚಾಗಿ ಪರೀಕ್ಷೆ ಮಾಡಬೇಕು. ಇದರಿಂದ ನಿರೀಕ್ಷೆಗೂ ಮೀರಿ ನಿಯಂತ್ರಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದರು.</p>.<p>ಈಗಾಗಲೇ, ಗುರುತಿಸಿರುವ ಕೆಂಪು ವಲಯ ಮತ್ತು ಹಾಟ್ಸ್ಪಾಟ್ ಪ್ರದೇಶಗಳಲ್ಲಿನ ಸೋಂಕಿತರ ಕುಟುಂಬಸ್ಥರನ್ನು ಪರೀಕ್ಷೆಗೆ ಒಳಪಡಿಸುವಂತೆ ಡಿಎಚ್ಒ ಡಾ.ನಾಗೇಂದ್ರಪ್ಪಗೆ ಸೂಚಿಸಿದರು.</p>.<p>ಶಿರಾ ಆಸ್ಪತ್ರೆಗೆ ಆಮ್ಲಜನಕ ಸಾಂದ್ರಕಗಳ ಅವಶ್ಯಕತೆ ಇರುವ ಬಗ್ಗೆ ಶಾಸಕ ರಾಜೇಶ್ ಗೌಡ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ದಾನಿಗಳು ಆಮ್ಲಜನಕ ಸಾಂದ್ರಕಗಳನ್ನು ನೀಡಿದ್ದು, ಶಿರಾ ಆಸ್ಪತ್ರೆಗೆ ಒದಗಿಸುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು.</p>.<p>ಶಾಸಕ ಮಸಾಲ ಜಯರಾಂ, ‘ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಣೆಯಾಗುತ್ತಿಲ್ಲ’ ಎಂದು ದೂರಿ ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸ್ವಚ್ಛತಾ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>